ದಿಗಂತ ವರದಿ ವಿಜಯಪುರ:
ಶೌಚಾಲಯ ಜಾಗಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆಗೈದು ಮೂವರು ಪರಾರಿಯಾಗಿರುವ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಿಲಾರಹಟ್ಟಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಮರಗು ಪಾಂಡ್ರೆ (55) ಹತ್ಯೆಯಾಗಿರುವ ವ್ಯಕ್ತಿ.
ಆರೋಪಿಗಳಾದ ಬೀರು, ಮಾಳಪ್ಪ ಸೇರಿದಂತೆ ಇನ್ನೋರ್ವ ಹತ್ಯೆಗೈದು ಪರಾರಿಯಾಗಿದ್ದಾರೆ ಎಂದು ಕುಟುಂಬಸ್ಥರ ಆರೋಪಿಸಿದ್ದಾರೆ. ಮರಗು ಪಾಂಡ್ರೆ ಹಾಗೂ ಆರೋಪಿಗಳ ಮಧ್ಯೆ ಶೌಚಾಲಯ ಜಾಗದ ವಿಷಯಕ್ಕೆ ಹಲವು ದಿನಗಳಿಂದ ಆಗಾಗ ಜಗಳ ಆಗುತ್ತಿತ್ತು ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.