ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಫಜಲಪುರ ತಾಲೂಕಿನ ಸಾಗನೂರು ಗ್ರಾಮದಲ್ಲಿ ಸಂಸದ ಡಾ. ಉಮೇಶ್ ಜಾಧವ್ ಬಲಗೈ ಬಂಟ ಗಿರೀಶ್ ಚಕ್ರನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಗಿರೀಶ್ ಚಕ್ರ ಕೊಲೆಯಾದ ಬಿಜೆಪಿ ಮುಖಂಡ. ನಾಲ್ಕು ದಿನಗಳ ಹಿಂದೆಯಷ್ಟೇ ಗಿರೀಶ್ ಅವರನ್ನು ಸಂಸದ ಉಮೇಶ್ ಜಾಧವ್ ಅವರು ಬಿಎಸ್ಎನ್ಎಲ್ ಸಲಹಾ ಸಮಿತಿಯ ನಿರ್ದೇಶಕರನ್ನಾಗಿ ನೇಮಿಸಿದ್ದರು.
ಇದನ್ನೇ ಗಮನದಲ್ಲಿಟ್ಟುಕೊಂಡು ಪಾರ್ಟಿ ಮಾಡೋಣ ಎಂದುಕೊಂಡಿದ್ದ ಗೆಳೆಯರು ಗಿರೀಶ್ ಚಕ್ರನನ್ನು ಜಮೀನಿಗೆ ಆಹ್ವಾನಿಸಿದ್ದರು. ಹೀಗಾಗಿ ಜಮೀನಿಗೆ ಬಂದಿದ್ದ ಗಿರೀಶ್ ಕಣ್ಣಿಗೆ ಖಾರದ ಪುಡಿ ಎಸೆದು ಬರ್ಬರವಾಗಿ ಹತ್ಯೆಗೈದಿದ್ದಾರೆ ಎನ್ನಲಾಗಿದೆ.
ಗಾಣಗಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ತೀವ್ರ ಶೋಧ ನಡೆಸಿದ್ದಾರೆ.