ವೃದ್ಧನ ಬರ್ಬರ ಹತ್ಯೆ: ದುಷ್ಕರ್ಮಿಗಳು ಪರಾರಿ

ದಿಗಂತ ವರದಿ ವಿಜಯಪುರ:

ಜಮೀನಿನಲ್ಲಿ ಮಲಗಿದ್ದ ವೃದ್ಧನ ಬರ್ಬರ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಸಾಲೋಟಗಿ ಗ್ರಾಮದಲ್ಲಿ ನಡೆದಿದೆ.

ಇಲ್ಲಿನ ಶಿವಯೋಗಪ್ಪ ಬಡಿಗೇರ (55) ಹತ್ಯೆಯಾಗಿರುವ ವೃದ್ಧ. ಜಮೀನಿನಲ್ಲಿ ಮಲಗಿದ್ದ ವೇಳೆ ಶಿವಯೋಗಪ್ಪನ ಕುತ್ತಿಗೆ ಕೊಯ್ದು ದುಷ್ಕರ್ಮಿಗಳು ಪರಾರಿಯಾಗಿದ್ದು, ಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!