ಹೊಸದಿಗಂತ ವರದಿ,ವಿಜಯಪುರ:
ಆಸ್ತಿಯ ವಿಚಾರಕ್ಕೆ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆಗೈದು ಇಬ್ಬರು ಆರೋಪಿಗಳು ಪರಾರಿಯಾಗಿರುವ ಘಟನೆ ಜಿಲ್ಲೆಯ ಇಟ್ಟಂಗಿಹಾಳ ಸಮೀಪದ ಜಮೀನಿನಲ್ಲಿ ನಡೆದಿದೆ.
ಸಂತೋಷ ಕಾಳೆ ಮೃತಪಟ್ಟಿರುವ ಯುವಕ.
ಸಂತೋಷ ಕಾಳೆ ಈತನನನ್ನು ಆತನ ಸಂಬಂಧಿಕರಲ್ಲಿನ ಇಬ್ಬರು ಆರೋಪಿಗಳು ಹತ್ಯೆಗೈದು ಪರಾರಿಯಾಗಿದ್ದಾರೆ ಎಂದು ದೂರಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
ಆದರ್ಶನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.