ಹೊಸದಿಗಂತ ವರದಿ, ಕುಶಾಲನಗರ:
ಭಾರೀ ಮಳೆಗೆ ಕೊಟ್ಟಿಗೆ ಗೋಡೆ ಕುಸಿದು ಎರಡು ಕರುಗಳು ಸಾವಿಗೀಡಾದ ಘಟನೆ ಇಲ್ಲಿಗೆ ಸಮೀಪದ ಶಿರಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂಡಲಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ಮಾದಪ್ಪ ಎಂಬವರಿಗೆ ಸೇರಿದ ಕೊಟ್ಟಿಗೆಯ ಗೋಡೆ ಭಾರೀ ಮಳೆಗೆ ಕುಸಿದು ಬಿದ್ದಿದ್ದು, ಎರಡು ಕರುಗಳು ಸಾವನ್ನಪ್ಪಿದರೆ, ಕೊಟ್ಟಿಗೆಯಲ್ಲಿದ್ದ ಒಂದು ಹಸುವಿಗೆ ಗಾಯವಾಗಿದೆ.
ಸ್ಧಳಕ್ಕೆ ಶಿರಂಗಾಲ ಗ್ರಾಮ ಪಂಚಾಯತಿ ಅಧ್ಯಕ್ಷೆ ಭಾಗೀರಥಿ, ಸದಸ್ಯರಾದ ಸರಿತಾ, ಶ್ರೀಕಾಂತ್, ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್, ಅಭಿವೃದ್ಧಿ ಅಧಿಕಾರಿ ಹೇಮಲತಾ, ಕಾರ್ಯದರ್ಶಿ ಕೆ.ಸಿ.ರವಿ, ಶಿರಂಗಾಲ ಪಶುವೈದ್ಯಾಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಗಾಯಗೊಂಡ ಹಸುವಿಗೆ ಚಿಕಿತ್ಸೆ ನೀಡಿ, ಪರಿಹಾರವನ್ನು ನೀಡುವ ಭರವಸೆ ನೀಡಿದ್ದಾರೆ.