ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ಇಂದಿನಿಂದ ಮಳೆಯೋ ಮಳೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನ ನಾಲ್ಕು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗಲಿದ್ದು, ಕರ್ನಾಟಕ, ಕೇರಳ, ಮಹಾರಾಷ್ಟ್ರ ಹಾಗೂ ಗುಜರಾತ್‌ನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಿಪೋರ್‌ಜೊಯ್ ಚಂಡಮಾರುತದ ಅಬ್ಬರಕ್ಕೆ ಕರಾವಳಿ ತತ್ತರಿಸಲಿದ್ದು, ಮುಂಗಾರುಮಳೆಗೂ ಅಡ್ಡಿಯಾಗುವ ಸಾಧ್ಯತೆ ಇದೆ. ಈ ಚಂಡಮಾರುತ ಕಾರಣದಿಂದ ಮುಂಗಾರು ಪ್ರವೇಶ ಮತ್ತಷ್ಟು ವಿಳಂಬವಾಗಲಿದೆ.

ಬಿಪೋರ್‌ಜೊಯ್ ಚಂಡಮಾರುತದಿಂದ ಸಮುದ್ರದಲ್ಲಿ ಭಾರೀ ಅಲೆಗಳು ಸೃಷ್ಟಿಯಾಗುವ ಸಾಧ್ಯತೆ ಇದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಇಂದು ಗಂಟೆಗೆ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಅಲೆಗಳು ಹೆಚ್ಚಿರುವ ಸಾಧ್ಯತೆ ಇದೆ ಹಾಗಾಗಿ ಪ್ರವಾಸಿಗಳು ಸಂಚರಿಸದೇ ಇರುವುದು ಉತ್ತಮ ಎಂದು ಹವಾಮಾನ ಇಲಾಖೆ ಸೂಚಿಸಿದೆ.

https://twitter.com/Indiametdept/status/1666187258955976704?s=20

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!