ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ಬಿಜೆಪಿ ಹೈಕಮಾಂಡ್ ಕರೆಯ ಮೇರೆಗೆ ದೆಹಲಿಗೆ ತೆರಳಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಇಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದರು.
ಈ ವೇಳೆ ಉಭಯ ನಾಯಕರು ರಾಜ್ಯ ರಾಜಕೀಯ, ಮುಂದಿನ ಲೋಕ ಸಭೆ ಚುನಾವಣೆ ತಯಾರಿ ಕುರಿತು ಚರ್ಚೆ ನಡೆಸಿದರು. ಅದೇ ರೀತಿ ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ಹಾಗು ವಿಪಕ್ಷ ನಾಯಕನ ನೇಮಕ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ.