ಹುಬ್ಬಳ್ಳಿ ಬಿಜೆಪಿ ಕಾರ್ಯಾಲಯಕ್ಕೆ ಬಸವರಾಜ ಹೊರಟ್ಟಿ ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಬೆಂಗಳೂರು:
ಇತ್ತೀಚೆಗೆ ಬಿಜೆಪಿ ಸೇರ್ಪಡೆಗೊಂಡ ವಿಧಾನ ಪರಿಷತ್ ಮಾಜಿ ಸಭಾಪತಿ ಹಾಗೂ ಹಿರಿಯ ರಾಜಕೀಯ ಧುರೀಣ ಬಸವರಾಜ ಹೊರಟ್ಟಿ ಅವರು ಶುಕ್ರವಾರ ಹುಬ್ಬಳ್ಳಿಯ ಪಕ್ಷದ ಕಾರ್ಯಾಲಯಕ್ಕೆ ಭೇಟಿ ನೀಡಿದ್ದರು.
ಪಕ್ಷದ ಮುಖಂಡರು, ಕಾರ್ಯಕರ್ತರಿಂದ ಆತ್ಮೀಯ ಸ್ವಾಗತ ಸ್ವೀಕರಿಸಿ ಮಾತನಾಡಿದ ಹೊರಟ್ಟಿ, ನಾನು ಯಾವ ಪಕ್ಷದಲ್ಲಿದ್ದರೂ ಆ ಪಕ್ಷದ ತತ್ವ, ಸಿದ್ಧಾಂತಗಳಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸಿದ್ದೇನೆ. ರಾಮಕೃಷ್ಣ ಹೆಗಡೆ, ದೇವೇಗೌಡ ಸೇರಿದಂತೆ ವಿವಿಧ ನಾಯಕರೊಂದಿಗೆ ಕೆಲಸ ಮಾಡಿದ ಅನುಭವವಿದೆ. ಬಿಜೆಪಿಯ ಎಲ್ಲಾ ತತ್ವ ಮತ್ತು ಸಿದ್ಧಾಂತಗಳನ್ನು ಪಾಲಿಸುತ್ತೇನೆ. ಪಕ್ಷ ನೀಡಿರುವ ಜವಾಬ್ದಾರಿಗಳನ್ನು ಶ್ರದ್ಧೆಯಿಂದ ನಿರ್ವಹಿಸಿ ಪಕ್ಷ ಸಂಘಟನೆಗೆ ಶ್ರಮಿಸುತ್ತೇನೆ ಎಂದರು.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮಾತನಾಡಿ, ಹೊರಟ್ಟಿಯವರನ್ನು ಮುಖ್ಯಮಂತ್ರಿಗಳ ಮನೆಯಲ್ಲಿ ಪಕ್ಷಕ್ಕೆ ಸ್ವಾಗತಿಸಿದ್ದೇವೆ. ನಮ್ಮ ಹುಬ್ಬಳ್ಳಿ ಕಾರ್ಯಾಲಯಕ್ಕೆ ಅವರು ಪ್ರಥಮ ಬಾರಿಗೆ ಭೇಟಿ ನೀಡುತ್ತಿದ್ದಾರೆ. ಹೊರಟ್ಟಿಯವರ ಸೇರ್ಪಡೆಯಿಂದ ಪಕ್ಷಕ್ಕೆ ಹೆಚ್ಚಿನ ಬಲ ಬಂದಿದೆ ಎಂದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಮಾತನಾಡಿ, ಹೊರಟ್ಟಿಯವರು ದೊಡ್ಡ ರಾಜಕೀಯ ಶಕ್ತಿ. ಅವರ ಪಕ್ಷ ಸೇರ್ಪಡೆಯಿಂದ ಒಳಿತಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!