ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಕ್ರಿಕೆಟಿಗ ಬ್ಯಾಟರ್ ಸರ್ಫರಾಜ್ ಖಾನ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಂಚಿಯ ಆಸ್ಪತ್ರೆಗೆ ಸರ್ಫರಾಜ್ ದಾಖಲಾಗಿದ್ದು, ವಿಜಯ್ ಹಜಾರೆ ಟ್ರೋಫಿಯಲ್ಲಿ ಮುಂಬೈ ತಂಡದ ಪರ ಆಡುತ್ತಿದ್ದ ಆಟಗಾರ ಯಾವ ಪಂದ್ಯದಲ್ಲಿಯೂ ಕಾಣಿಸಿಲ್ಲ.
ಶನಿವಾರವೇ ಆಸ್ಪತ್ರೆಗೆ ದಾಖಲಾಗಿದ್ದು, ಭಾನುವಾರ ನಡೆದ ಸರ್ವೀಸಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಲು ಸಾಧ್ಯವಾಗಿಲ್ಲ. ಈ ಬಗ್ಗೆ ಸರ್ಫರಾಜ್ ತಂದೆ ಮಾತನಾಡಿದ್ದು, ಸರ್ಫರಾಜ್ ಕಿಡ್ನಿ ಸ್ಟೋನ್ಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆಗಾಗ ನೋವು ಕಾಣುತ್ತದೆ. ನೋವು ಹೆಚ್ಚಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.