Monday, December 11, 2023

Latest Posts

ಬಂಗಾಳಕೊಲ್ಲಿ ವಾಯುಭಾರ ಕುಸಿತ: ತಮಿಳುನಾಡು, ಒರಿಸ್ಸಾ ಸಹಿತ ವಿವಿಧ ರಾಜ್ಯಗಳಲ್ಲಿ ಮಳೆ ಮುನ್ಸೂಚನೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಂಗಾಳಕೊಲ್ಲಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದ ತಮಿಳುನಾಡು, ಒರಿಸ್ಸಾ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮುಂದಿನ ಐದು ದಿನ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಬಂಗಾಳಕೊಲ್ಲಿಯಲ್ಲಿನ ಕಡಿಮೆ ಒತ್ತಡದ ಪ್ರದೇಶವು ಮುಂದಿನ ಒಂದೆರಡು ದಿನಗಳಲ್ಲಿ ತನ್ನ ಮೂಲ ಸ್ಥಾನದಿಂದ ಪಶ್ಚಿಮ-ವಾಯುವ್ಯ ದಿಕ್ಕಿನತ್ತ ಚಲಿಸಲಿದೆ. ಇಂದು ವಾಯುಭಾರ ಕುಸಿತವು ತೀವ್ರತೆ ಹೆಚ್ಚಾಗಲಿದೆ. ಈ ವೇಳೆ ಉತ್ತರ-ಈಶಾನ್ಯ ಭಾಗದತ್ತ ಒಡಿಶಾ ಕರಾವಳಿ ಭಾಗವನ್ನು ನವೆಂಬರ್ 17 ರಂದು ತಲುಪುವ ನಿರೀಕ್ಷೆ ಇದೆ. ಹೀಗಾಗಿ ಬೇರೆಲ್ಲ ರಾಜ್ಯಗಳಿಗಿಂತಲೂ ಈ ರಾಜ್ಯಗಳಲ್ಲಿ ಅತ್ಯಧಿಕ ಮಳೆ ನಿರೀಕ್ಷೆ ಇದೆ. ಮುಂದಿನ ಐದು ದಿನಗಳಲ್ಲಿ ಓಡಿಶಾದಲ್ಲಿ ವ್ಯಾಪಕ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಅದರಲ್ಲೂ ಇಂದು ಮತ್ತು ನಾಳೆ ರಾಜ್ಯದ ಹೆಚ್ಚಿನ ಸ್ಥಳಗಳಲ್ಲಿ ಮಳೆಯಾಗಲಿದೆ ಎಂದು ಭುವನೇಶ್ವರ್ ಪ್ರಾದೇಶಿಕ ಐಎಂಡಿ ಕೇಂದ್ರದ ವಿಜ್ಞಾನಿ ಸಂಜೀವ್ ದ್ವಿವೇದಿ ಮಾಹಿತಿ ನೀಡಿದ್ದಾರೆ. ಒಡಿಶಾದ ಬಹುತೇಕ ಕರಾವಳಿ, ದಕ್ಷಿಣ ಮತ್ತು ಉತ್ತರ ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆ ಸಂಭವವಿದೆ. ಹೀಗಾಗಿ ಮೀನುಗಾರರು ಮೀನುಗಾರಿಕೆಗೆ ನೀರಿಗಿಳಿಯಂದೆ ಸೂಚನೆ ನೀಡಲಾಗಿದೆ.

ಚೆನ್ನೈನಲ್ಲಿ ಅಕ್ಟೋಬರ್ 1 ರಿಂದ ಈವರೆಗೆ ಶೇಕಡಾ 57ರಷ್ಟು ಮಳೆ ಕೊರತೆ ಆಗಿದೆ ಎಂದು ಐಎಂಡಿ ಮೂಲಗಳು ತಿಳಿಸಿವೆ. ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಚಂಡಮಾರುತದಿಂದಾಗಿ ತಮಿಳುನಾಡಿನ ಹಲವು ಭಾಗಗಳಲ್ಲಿ ಮಧ್ಯಂತರ ಭಾರೀ ಮಳೆಯಾಗುತ್ತಿದೆ. ನಾಗಪಟ್ಟಣಂ ಜಿಲ್ಲೆಯ ವೇಲಂಕಣಿಯಲ್ಲಿ 17 ಸೆಂ.ಮೀ ಮಳೆಯಾಗಿದೆ. ನಾಗಪಟ್ಟಣಂನಲ್ಲಿ 15, ಕಾರೈಕಲ್ 14 ಸೆಂ.ಮೀ ಮಳೆ ದಾಖಲಾಗಿದೆ.

ಆಂಧ್ರಪ್ರದೇಶದ ವಿಶಾಖಪಟ್ಟಣಂ, ವಿಜಯನಗರಂ ಮತ್ತು ಶ್ರೀಕಾಕುಳಂ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ. ಬಂಗಾಳಕೊಲ್ಲಿಯ ಕಡಿಮೆ ಒತ್ತಡದ ಪ್ರದೇಶ ತೀವ್ರಗೊಂಡರೆ ಅಪಾರ ಮಳೆ ಆಗಲೂಬಹುದು. ಸದ್ಯ ಚಿತ್ತೂರು, ತಿರುಪತಿ, ನೆಲ್ಲೂರು ಜಿಲ್ಲೆಗಳಲ್ಲಿ ಮಂಗಳವಾರ ಹಗುರದಿಂದ ಸಾಧಾರಣ ಮಳೆ ದಾಖಲಾಗಿದೆ. ಇಂದು ಒಂದೆರಡು ಕಡೆ ಜೋರು ಮಳೆ ಆಗಲಿದೆ ಎಂದು ಮುನ್ಸೂಚನೆ ಕೊಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!