ಹೊಸದಿಗಂತ ವರದಿ,ಚಿತ್ರದುರ್ಗ:
ಚಿತ್ರದುರ್ಗ ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧಿಕಾರಿ ಪ್ರಭಾರ ಕಾರ್ಯದರ್ಶಿ ಎಸ್.ವೈ.ಬಸವರಾಜ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಅಧಿಕಾರಿ.
ಜಗಳೂರು ಮೂಲದ ಸಿದ್ದನಗೌಡ ಎಂಬವರಿಗೆ ಕಾಮಗಾರಿ ಪೆಂಡಿಂಗ್ ಬಿಲ್ ಮಾಡಿಕೊಡುವ ಕುರಿತು ೪ ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟಿದ್ದರು. ಇದಕ್ಕೆ ಸಂಬಂಧಿಸಿದ ಹಣ ಪಡೆಯುವಾಗ ಸೋಮವಾರ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾರೆ.
ಲೋಕಾಯುಕ್ತ ಎಸ್ಪಿ ವಾಸುದೇವರಾವ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.