ಕೇರಳದಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ಬಿಜೆಪಿ , ಯುವ ಮೋರ್ಚಾದಿಂದ ಬೃಹತ್ ಪ್ರತಿಭಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಬಿಸಿ ಸಾಕ್ಷ್ಯಚಿತ್ರ ‘ಇಂಡಿಯಾ: ಮೋದಿ ಕ್ವಶ್ಚನ್’ ಅನ್ನು ಕೇರಳದಾದ್ಯಂತ ಎಸ್‌ಎಫ್‌ಐ ಪ್ರದರ್ಶನ ಮಾಡಿದ್ದು, ಇದನ್ನು ವಿರೋಧಿಸಿ ಬಿಜೆಪಿ ಹಾಗೂ ಯುವ ಮೋರ್ಚಾ ಪ್ರತಿಭಟನೆ ನಡೆಸಿವೆ.

ಕೇರಳ ಮಾತ್ರವಲ್ಲದೆ ದೇಶದ ವಿವಿಧ ಭಾಗಗಳಲ್ಲಿ ಈ ಸಾಕ್ಷ್ಯಚಿತ್ರವನ್ನು ಪ್ರದರ್ಶನ ಮಾಡಲಾಗಿದೆ. ಇದರ ಬೆನ್ನಲ್ಲಿಯೇ ಬಿಜೆಪಿ ಹಾಗೂ ಯುವ ಮೋರ್ಚಾ ಕೂಡ ತನ್ನ ಪ್ರತಿಭಟನೆಯನ್ನು ತೀವ್ರ ಮಾಡಿದೆ.

ಪಾಲಕ್ಕಾಡ್‌ನ ವಿಕ್ಟೋರಿಯಾ ಕಾಲೇಜು ಮತ್ತು ಎರ್ನಾಕುಲಂನ ಸರ್ಕಾರಿ ಕಾನೂನು ಕಾಲೇಜಿನವರೆಗೆ ಯುವ ಮೋರ್ಚಾದಿಂದ ಪ್ರತಿಭಟನಾ ಮೆರವಣಿಗೆಗಳನ್ನು ನಡೆಸಿತು. ಅಲ್ಲಿ ಎಸ್‌ಎಫ್‌ಐ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವ ಘೋಷಣೆ ಮಾಡಿತ್ತು.

ಸಾಕ್ಷ್ಯಚಿತ್ರಕ್ಕೆ ಅಚ್ಚರಿ ಎನ್ನುವಂತೆ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಮಾಜಿ ರಕ್ಷಣಾ ಸಚಿವ ಎಕೆ ಆಂಟನಿ ಅವರ ಪುತ್ರ ಅನಿಲ್‌ ಆಂಟನಿ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!