ಕೋವಿಡ್‌ ಸ್ಕ್ಯಾಮ್‌ | ಬಿಬಿಎಂಪಿ ಅಧಿಕಾರಿಗಳಿಗೆ ಶಾಕ್‌, ನೊಟೀಸ್‌ಗೆ ಉತ್ತರ ಕೊಡದವರ ವಿಚಾರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರದಿಂದ ಬಿಬಿಎಂಪಿಯಲ್ಲಿ ವಿಚಾರಣೆ ನಡೆಯಲಿದೆ.

ನೋಟಿಸ್ ಉತ್ತರ ಕೊಡದ 29 ಅಧಿಕಾರಿಗಳ ಪೈಕಿ 17 ಅಧಿಕಾರಿಗಳ ಇಲಾಖಾ ವಿಚಾರಣೆ ನಡೆಸಲು ಮುಖ್ಯ ಆಯುಕ್ತರು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇಲಾಖೆ ವಿಚಾರಣೆ ಬಳಿಕ ನೋಟಿಸ್‍ಗೆ ಉತ್ತರಿಸದ ಅಧಿಕಾರಿಗಳ ವಿರುದ್ಧ ಕ್ರಮ ಆಗಲಿದೆ.

ಬಿಜೆಪಿ ಕಾಲದ ಕೋವಿಡ್ ಹಗರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯ 200ಕ್ಕೂ ಹೆಚ್ಚು ಅಧಿಕಾರಿಗಳಿಗೆ ಖರ್ಚು ವೆಚ್ಚದ ಬಗ್ಗೆ ಮಾಹಿತಿ ನೀಡುವಂತೆ ನೋಟಿಸ್ ನೀಡಲಾಗಿತ್ತು. ನೋಟಿಸ್‍ಗೆ ಬಹುತೇಕ ಆರೋಗ್ಯಾಧಿಕಾರಿಗಳು ಉತ್ತರ ನೀಡಿದ್ದಾರೆ. ಆದರೆ 29 ಅಧಿಕಾರಿಗಳು ನೋಟಿಸ್‍ಗೆ ಉತ್ತರವೇ ನೀಡಿಲ್ಲ. ಉತ್ತರ ನೀಡದ ಅಧಿಕಾರಿಗಳ ವಿರುದ್ಧ ಇಲಾಖೆ ಹಂತದಲ್ಲಿ ವಿಚಾರಣೆ ಮಾಡಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವಿಶೇಷ ಆಯುಕ್ತ ವಿಕಾಸ್ ಸೂರಳ್ಕರ್ ಅವರಿಗೆ ಸೂಚಿಸಿದ್ದಾರೆ.

ಇಂದಿನಿಂದ ಇಲಾಖಾ ಹಂತದ ವಿಚಾರಣೆ ನಡೆಯಲಿದೆ. ನೋಟಿಸ್‍ಗೆ ಯಾಕೆ ಉತ್ತರ ನೀಡಿಲ್ಲ. ಏನು ಕಾರಣ? ನಿಮ್ಮ ಅವಧಿಯಲ್ಲಿ ಎಷ್ಟು ಖರ್ಚು ಆಗಿತ್ತು ರಂದು ಪ್ರಶ್ನಿಸಲಿದ್ದಾರೆ. ಸರಿಯಾದ ಉತ್ತರ ಬರದೇ ಇದ್ದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಅಥವಾ ಅಮಾನತು ಮಾಡುವ ನಿರ್ಧಾರ ಕೈಗೊಳ್ಳಲಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!