July 10, 2026
Friday, July 10, 2026
spot_img

ಸತತ ಸೋಲಿನಿಂದ ಬಿಸಿಸಿಐ ಅಲರ್ಟ್: ಅಯ್ಯರ್-ಗಂಭೀರ್‌ಗೆ ತುರ್ತು ಸಭೆ ಕರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸದಲ್ಲಿ ಒಂದೂ ಪಂದ್ಯ ಗೆಲ್ಲದ ಟೀಂ ಇಂಡಿಯಾದ ಕಳಪೆ ಪ್ರದರ್ಶನದ ಬೆನ್ನಲ್ಲೇ ಬಿಸಿಸಿಐ ಎಚ್ಚೆತ್ತುಕೊಂಡಿದೆ.

ಸರಣಿ ಮುಗಿದ ಬಳಿಕ ನಾಯಕ ಶ್ರೇಯಸ್ ಅಯ್ಯರ್ ಹಾಗೂ ಮುಖ್ಯ ಕೋಚ್ ಗೌತಮ್ ಗಂಭೀರ್ ಜೊತೆ ಮಹತ್ವದ ಪರಿಶೀಲನಾ ಸಭೆ ನಡೆಸಲು ಮಂಡಳಿ ತೀರ್ಮಾನಿಸಿದೆ.

ಪ್ರದರ್ಶನದ ಬಗ್ಗೆ ಬಿಸಿಸಿಐಗೆ ಕಳವಳ

ತಂಡದ ನಿರಂತರ ಸೋಲುಗಳು ಆತಂಕಕ್ಕೆ ಕಾರಣವಾಗಿದ್ದು, ದುರ್ಬಲತೆಗಳನ್ನು ಗುರುತಿಸಿ ಸುಧಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಬಿಸಿಸಿಐ ಮುಂದಾಗಿದೆ. ತಂಡವನ್ನು ಮತ್ತೆ ಗೆಲುವಿನ ಹಾದಿಗೆ ತರಲು ಚರ್ಚೆ ನಡೆಯಲಿದೆ.

ಇದನ್ನೂ ಓದಿ:

ಎರಡು ಸರಣಿಗಳಲ್ಲೂ ನಿರಾಸೆ

ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತ 2-0 ಅಂತರದಿಂದ ಕ್ಲೀನ್‌ಸ್ವೀಪ್‌ಗೆ ಒಳಗಾಯಿತು. ಬಳಿಕ ಇಂಗ್ಲೆಂಡ್ ವಿರುದ್ಧವೂ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿ ಸರಣಿಯನ್ನು ಕಳೆದುಕೊಂಡಿದೆ.

ಕೊನೆಯ ಪಂದ್ಯದಲ್ಲಿ ಗೆಲುವಿನ ಒತ್ತಡ

ಇಂಗ್ಲೆಂಡ್ ವಿರುದ್ಧ ಇನ್ನೊಂದು ಪಂದ್ಯ ಮಾತ್ರ ಬಾಕಿಯಿದ್ದು, ಕ್ಲೀನ್‌ಸ್ವೀಪ್ ತಪ್ಪಿಸಿಕೊಳ್ಳುವುದರ ಜೊತೆಗೆ ಟಿ20 ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನ ಉಳಿಸಿಕೊಳ್ಳಬೇಕಾದರೆ ಭಾರತಕ್ಕೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !