ಹೊಸದಿಗಂತ ವರದಿ, ಹುಬ್ಬಳ್ಳಿ
ಇಲ್ಲಿಯ ಕೇಶ್ವಾಪುರದ ಸೆಂಟ್ ಮೈಕಲ್ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಹೆಜ್ಜೇನುಗಳು ದಾಳಿ ನಡೆಸಿದ ಪರಿಣಾಮ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸೋಮವಾರ ಗಣಿತ ವಿಷಯ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳು, ಪರೀಕ್ಷಾ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಶಿಕ್ಷಕರು, ಪಾಲಕರು ಮತ್ತು ಸ್ಥಳದಲ್ಲಿದ್ದ ಪೊಲೀಸರ ಮೇಲೂ ಜೇನುನೊಣಗಳ ದಾಳಿ ಮಾಡಿವೆ. ಈ ವೇಳೆ ಹಲವಾರು ಮಂದಿ ಗಾಯಗೊಂಡಿದ್ದಾರೆ.
ಜೇನುಗಳು ಏಕಾಏಕಿ ದಾಳಿ ನಡೆಸಲು ಕಿಡಿಗೇಡಿಗಳ ಕೃತ್ಯವೇ ಕಾರಣ ಎಂಬುದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡ ಐವರನ್ನು ನಗರದ ಕಿಮ್ಸ್ ಆಸ್ಪತ್ರೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ