ಗೋಮಾಂಸ ಸಾಗಾಟ: ಅಸ್ಸಾಂ ಮೂಲದ ಕಾರ್ಮಿಕರಿಬ್ಬರ ಬಂಧನ

ಹೊಸದಿಗಂತ ವರದಿ, ಮಡಿಕೇರಿ
ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಆರೋಪದಡಿ ಅಸ್ಸಾಂ ಮೂಲದ ಕಾರ್ಮಿಕರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಅಸ್ಸಾಂ ಮೂಲದ ಕಾರ್ಮಿಕರು ಗೋಮಾಂಸ ಸಾಗಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಮಾಲಂಬಿಯ ಭಜರಂಗದಳದ ಕಾರ್ಯಕರ್ತರು ಪಡೆದುಕೊಂಡಿದ್ದರು.
ಮಾಹಿತಿಯಾಧರಿಸಿ ಕಾರ್ಯಾಚರಣೆ ನಡೆಸುವ ಸಂದರ್ಭದಲ್ಲಿ ಹಾಸನ ಜಿಲ್ಲೆ ಅರಕಲಗೂಡಿನ ಹಂಡ್ರಂಗಿಯಲ್ಲಿ ಗೋಮಾಂಸ ಸಾಗಿಸುತ್ತಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
ಆರೋಪಿಗಳು ಶನಿವಾರಸಂತೆ ಸಮೀಪದ ಮಾಲಂಬಿ ಕಣಿವೆ ಬಸವನಹಳ್ಳಿಯ ಕಾಫಿ ತೋಟದ ಲೈನ್ ಮನೆಯಲ್ಲಿರುವ ಅಸ್ಸಾಂ ಕಾರ್ಮಿಕರೆಂದು ತಿಳಿದುಬಂದಿದ್ದು, ತಮ್ಮ ದ್ವಿಚಕ್ರ ವಾಹನದಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದರೆಂದು ಹೇಳಲಾಗಿದೆ.
ಶನಿವಾರಸಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!