ಬೆಳಗಾವಿ ಗುಂಡಿಗಳ ನಗರಿ: ಜಿಲ್ಲಾಧಿಕಾರಿ ಕಚೇರಿ ಸುತ್ತಲೂ ಕೆಸರುಗದ್ದೆ, ಸಾರ್ವಜನಿಕರ ಆಕ್ರೋಶ

ಹೊಸದಿಗಂತ ವರದಿ ಬೆಳಗಾವಿ: ರಾಜ್ಯದ ಎರಡನೇ ರಾಜಧಾನಿ ಎಂಬ ಹೆಗ್ಗಳಿಕೆ ಹೊಂದಿರುವ, ರಾಜ್ಯದಲ್ಲಿಯೇ ಅತಿದೊಡ್ಡ ಜಿಲ್ಲೆಯಾದ ಬೆಳಗಾವಿ ಇಂದು ಮೂಲಸೌಕರ್ಯಗಳ ಕೊರತೆಯಿಂದ ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಸುವರ್ಣ ವಿಧಾನಸೌಧ ಹೊಂದಿರುವ ಗಡಿ ಜಿಲ್ಲೆ ಬೆಳಗಾವಿ ಇದೀಗ “ಗುಂಡಿಗಳ ನಗರಿ”ಯಾಗಿ ಮಾರ್ಪಟ್ಟಿದೆ ಎಂಬ ಟೀಕೆ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ. ಮಳೆ ಆರಂಭವಾದರೆ ಸಾಕು, ನಗರದ ಹಲವು ಪ್ರಮುಖ ರಸ್ತೆಗಳು ಕೆಸರುಗದ್ದೆಗಳಾಗಿ ಬದಲಾಗುತ್ತಿವೆ. ಅದರಲ್ಲೂ ಜಿಲ್ಲಾಧಿಕಾರಿ ಕಚೇರಿಯ ಪಕ್ಕದಲ್ಲಿರುವ ತಾಲೂಕು ಪಂಚಾಯತ್ ರಸ್ತೆಯ ದುಸ್ಥಿತಿ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಿದಿನ … Continue reading ಬೆಳಗಾವಿ ಗುಂಡಿಗಳ ನಗರಿ: ಜಿಲ್ಲಾಧಿಕಾರಿ ಕಚೇರಿ ಸುತ್ತಲೂ ಕೆಸರುಗದ್ದೆ, ಸಾರ್ವಜನಿಕರ ಆಕ್ರೋಶ