ಬೆಳಗಾವಿ ಗಡಿ ವಿಚಾರ ಮಹಾಜನ್ ವರದಿಯೇ ಅಂತಿಮ: ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಸ್ಪಷ್ಟನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಳಗಾವಿ ಗಡಿ ವಿಚಾರದಲ್ಲಿ ಯಾವುದೇ ವಿವಾದವಿಲ್ಲ. ಈ ಬಗ್ಗೆ ಮಹಾಜನ್ ವರದಿಯೇ ಅಂತಿಮ. ಇದು ಕರ್ನಾಟಕ ಸರ್ಕಾರದ ಅಂತಿಮ ನಿಲುವು. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂಬುದಾಗಿ ಗಡಿ ಹಾಗೂ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬೆಳಗಾವಿ ಗಡಿಯ ವಿಚಾರವಾಗಿ ಸದನದಲ್ಲಿ ಬಹಳಷ್ಟು ಚರ್ಚೆಯಾಗಿದೆ. ಮಹಾಜನ್ ವರದಿ ಅಂತಿಮ ಎಂಬುದಾಗಿ ಸದನದಲ್ಲೇ ತೀರ್ಮಾನವಾಗಿದೆ. ನಮ್ಮ ನಿಲುವು ಸ್ಪಷ್ಟ. ಮಹಾಜನ್ ವರದಿಯೇ ಅಂತಿಮ. ಅದರಲ್ಲಿ ಯಾವುದೇ ಗೊಂದಲವಿಲ್ಲ ಎಂಬುದಾಗಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!