ಹೊಸದಿಗಂತ ವರದಿ ಬೆಳಗಾವಿ :
ಮಹಾರಾಷ್ಟ್ರ ಸಚಿವರ ವಿರುದ್ಧ ರಣಕಹಳೆ ಮೊಳಗಿಸಲು ಆಗಮಿಸುತ್ತಿದ್ದ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರನ್ನು ಜಿಲ್ಲೆಯ ಹಿರೇಬಾಗೇವಾಡಿ ಟೋಲ್ ಬಳಿ ಪೊಲೀಸರು ತಡೆ ಹಿಡಿದ್ದಾರೆ.
ಪೊಲೀಸರ ನಡೆ ಖಂಡಿಸಿ ಕರವೇ ಕಾರ್ಯಕರ್ತರು ಮಹಾರಾಷ್ಟ್ರ ನೋಂದಣಿ ಹೊಂದಿರುವ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ, ಕಪ್ಪು ಮಸಿ ಬಳದಿದ್ದಾರೆ.