September 13, 2026
Sunday, September 13, 2026
spot_img

ಬೆಳಗಾವಿ: ಸೇವಾಲಾಲ ಜಯಂತಿ ಮೆರವಣಿಗೆಗೆ ಚಾಲನೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್

ಹೊಸದಿಗಂತ ವರದಿ ಬೆಳಗಾವಿ:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೆಳಗಾವಿ ಅಶೋಕ ವೃತ್ತದಲ್ಲಿ ಸಂತ ಶ್ರೀ ಸೇವಾಲಾಲ ಮಹಾರಾಜರ ಮೆರವಣಿಗೆಗೆ ಚಾಲನೆ ನೀಡಿದರು.

ಸೇವಾಲಾಲ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಗೌರವ ನಮನ ಸಲ್ಲಿಸಿದ ಸಚಿವರು ಮೆರವಣಿಗೆಯಲ್ಲಿ ಪಾಲ್ಗೊಂಡರು.

ಈ ವೇಳೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಲಕ್ಷ್ಮೀ ಮಹಾದೇವ ರಾಥೋಡ್, ಸುರೇಶ ರಾಥೋಡ್, ದೇವೇಂದ್ರ ನಾಯ್ಕ, ಸೋಮಪ್ಪ ಕಾರಬಾರಿ, ಕಾಂತೇಶ್ ರಾಥೋಡ್, ಅಶೋಕ ಪೂಜಾರಿ, ವಿಷ್ಣು ಲಮಾಣಿ, ಪಾಂಡುರಂಗ ನಾಯ್ಕ ಸೇರಿದಂತೆ ಬಂಜಾರಾ ಸಮುದಾಯದ ಇತರರು ಇದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !