ಶೋಕದ ನಡುವೆಯೇ ಸಹಜ ಸ್ಥಿಯತ್ತ ಮರಳುತ್ತಿದೆ ಕೆರಳಿದ ಕರಾವಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯದಲ್ಲೇ ತಲ್ಲಣ ಮೂಡಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ಉದ್ವಿಗ್ನಗೊಂಡಿದ್ದ ಸುಳ್ಯದ ಬೆಳ್ಳಾರೆ, ಪುತ್ತೂರು, ಕಡಬ, ಬಂಟ್ವಾಳ ಮೊದಲಾದ ಪರಿಸರ ನಿಧಾನವಾಗಿ ಸಹಜ ಸ್ಥಿತಿಗೆ ಬರುತ್ತಿದೆ.

ಗುರುವಾರ ಅಂಗಡಿ ಮುಂಗಟ್ಟುಗಳು ಎಂದಿನಂತೆ ತೆರೆದಿದ್ದು, ಜನ ಜೀವನ ಮತ್ತೆ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿವೆ. ಆದರೂ ಪರಿಸರದುದ್ದಕ್ಕೂ ಶೋಕದ ಛಾಯೆ ಗಾಢವಾಗಿಯೇ ಇನ್ನೂ ಆವರಿಸಿದೆ.

ಹಿಂದು ಸಂಘಟನೆಗಳು ನೀಡಿದ್ದ ಸ್ವಯಂ ಪ್ರೇರಿತ ಬಂದ್ ಕರೆ ಹಿನ್ನೆಲೆಯಲ್ಲಿ ಬುಧವಾರ ವ್ಯಾಪಾರ ವಹಿವಾಟುಗಳು ಸಂಪೂರ್ಣ ಬಂದ್ ಆಗಿದ್ದವು. ಈ ನಡುವೆ ಪೊಲೀಸ್ ಬಂದೋಬಸ್ತ್ ಇನ್ನಷ್ಟು ಹೆಚ್ಚಿಸಲಾಗಿದ್ದು, ಗುರುವಾರ ಶಾಲೆ-ಕಾಲೇಜುಗಳು ಎಂದಿನಂತೆ ಆರಂಭಗೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!