ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ: ಸಂಸದ, ಸಚಿವ, ಶಾಸಕರುಗಳಿಗೆ ತಟ್ಟಿದ ಪ್ರತಿಭಟನೆಯ ಬಿಸಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಬೆಳ್ಳಾರೆಯಲ್ಲಿ ಬರ್ಬರ ಹತ್ಯೆಗೊಳಗಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಅವರ ಮೃತದೇಹದ ಅಂತಿಮ ದರ್ಶನದ ವೇಳೆ ಅಸಮಾಧಾನ ಗೊಂಡ ಗುಂಪೊಂದು ಬೆಳ್ಳಾರೆ ಜಂಕ್ಷನಿನಲ್ಲಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಧಿಕ್ಕಾರ ಕೂಗಿದ್ದಾರೆ.
ಬೆಳ್ಳಾರೆಗೆ ನಳಿನ್ ಕುಮಾರ್ ಕಟೀಲ್, ಸಚಿವ ಸುನೀಲ್‌ ಕುಮಾರ್ ಮತ್ತು ಪುತ್ತೂರು ಶಾಸಕ ಸಂಜೀವ ಮಠಂದೂರು ಬಂದಿಳಿಯುತ್ತಿದ್ದಂತೆಯೇ ಆಕ್ರೋಶ ವ್ಯಕ್ತಪಡಿಸಿದ ಕೆಲವರು ಧಿಕ್ಕಾರ ಕೂಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!