ಬೆಳ್ಳಾರೆಯ ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಮೂರು ಮಂದಿಯ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನೆಡದ ಬಿಜೆಪಿ ಯುವಮೋರ್ಚ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಮೂರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ10ಕ್ಕೆ ಏರಿಕೆಯಾಗಿದೆ. ಸುಳ್ಯ ನಿವಾಸಿ ಶಿಯಾಜುದ್ದೀನ್ ಆಲಿ (33), ರಿಯಾಜ್ ಅಂಕತಡ್ಕ(29), ಸುಬ್ರಹ್ಮಣ್ಯ ಎಳಿಮಲೆ ನಿವಾಸಿ ಬಶೀರ್(29) ಬಂಧಿತರು. ಬಂಧಿತರನ್ನ ಉಳ್ಳಾಲ ಸಮೀಪದ ತಲಪಾಡಿಯಲ್ಲಿ ಬಂಧಿಸಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ರಿಯಾಜ್ ಅಂಕತಡ್ಕ ಚಿಕನ್ ಸ್ಟಾಲ್ ಗಳಿಗೆ ಕೋಳಿ ಸಪ್ಲೈ ಮಾಡುತ್ತಿದ್ದ ಕೆಲಸ ನಿರ್ವಹಿಸಿತ್ತಿದ್ದ. ಬಶೀರ್ ಹೋಟೆಲೊಂದರಲ್ಲಿ ಕೆಲಸ ನಿರ್ವಹಿಸುದ್ದವನಾಗಿದ್ದಾನೆ. ಅದೇ ರೀತಿ ಸಾಯಿಬುದ್ದೀನ್ ಕೊಕೊ ಸಪ್ಲೈ ಮಾಡುತ್ತಿದ್ದ. ಬಂಧಿತರನ್ನು ಕೋರ್ಟ್ ಗೆ ಹಾಜರುಪಡಿಸಿದ ಬಳಿಕ ಕಸ್ಟಡಿಗೆ ಪಡೆದುಕೊಳ್ಳಲಾಗುವುದು. ತನಿಖೆಯ ಸಮಗ್ರ ಮಾಹಿತಿಯನ್ನು ಎನ್ಐಗೆ ನೀಡಲಾಗುವುದು ಎಂದು ಎಡಿಜಿಪಿ ವಿವರಿಸಿದರು.

ಬಂಧಿತರ ವಿಚಾರಣೆ ಬಳಿಕ ಇನ್ನು ಯಾರಾದರೂ ಇದ್ದರೆ ಅವರನ್ನು ಕೂಡ ಬಂಧಿಸಲಾಗುವುದು. ಆಶ್ರಯ ನೀಡಿದವರು, ಆರ್ಥಿಕ ಸಹಾಯ ಮಾಡಿದವರು ಈ ಎಲ್ಲಾ ಮಾಹಿತಿಯನ್ನು ಪಡೆಯಲಾಗುವುದು. ಪ್ರವೀಣ್ ನನ್ನೇ ಯಾಕೆ ಟಾರ್ಗೆಟ್ ಮಾಡಲಾಗಿದೆ ಎಂಬ ಮಾಹಿತಿ ಕೂಡ ಪಡೆಯಲಾಗುವುದು ಎಂದವರು ತಿಳಿಸಿದರು. ಬಂಧಿತರ ಹಿನ್ನೆಲೆಯ ಬಗ್ಗೆ ಕಸ್ಟಡಿಗೆ ಪಡೆದು ಮಾಹಿತಿ ಪಡೆಯಲಾಗುವುದು ಎಂದು ಎಡಿಜಿಪಿ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!