ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿನ ಐಸಿಯುನಲ್ಲಿ ವಿದ್ಯುತ್ ಸ್ಥಗಿತಗೊಂಡ ಪರಿಣಾಮ ಮೂವರು ರೋಗಿಗಳು ಸಾವನ್ನಪ್ಪಿದ್ದು, ವಿಧಾನಸಭೆಯಲ್ಲಿಯೂ ಈ ವಿಚಾರ ಸದ್ದು ಮಾಡಿತು.
ಇದರ ಬೆನ್ನಲ್ಲೇ ಸಿಎಂ ಬಸವರಾಜ ಬೊಮ್ಮಾಯಿಯವರು ಮೃತ ಮೂವರು ರೋಗಿಗಳ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಮತ್ತೊಂದೆಡೆ ವಿಮ್ಸ್ ಆಸ್ಪತ್ರೆಯ ಐಸಿಯು ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಉನ್ನತ ಮಟ್ಟದ ಸಮಿತಿ ರಚಿಸಿ ತನಿಖೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಚಿವ ಸುಧಾಖರ್ ಟ್ವಿಟ್ ಮಾಡಿದ್ದು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ಸಂಭವಿಸಿದ ಘಟನೆ ಅತ್ಯಂತ ದುರದೃಷ್ಟಕರವಾಗಿದ್ದು, ಘಟನೆಯ ಬಗ್ಗೆ ಸೂಕ್ತ ಇಲಾಖಾ ತನಿಖೆ ನಡೆಸಿ ಆಡಳಿತಾತ್ಮಕ ಹಾಗೂ ತಾಂತ್ರಿಕ ಲೋಪದೋಷಗಳ ಬಗ್ಗೆ ವರದಿ ನೀಡಲು ಬಿಎಂಸಿಆರ್ ಐ ಸಂಸ್ಥೆಯ ಡಾ.ಸ್ಮಿತಾ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲಾಗಿದೆ ಅಂತ ತಿಳಿಸಿದ್ದಾರೆ.