ಹೆದ್ದಾರಿಯಲ್ಲಿ ಅಪರಿಚಿತ ದುಷ್ಕರ್ಮಿಗಳಿಂದ ಗುಂಡಿನ ದಾಳಿ: ಬಿಜೆಪಿ ಮುಖಂಡನ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಿನ್ನೆ ರಾತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಜೆಪಿ ಮುಖಂಡರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್ ಜಿಲ್ಲೆಯಲ್ಲಿ ನಡೆದಿದೆ. ಹಲವು ಪ್ರಕರಣಗಳನ್ನು ಎದುರಿಸಿರುವ ರಾಜು ಝಾ ಅಕ್ರಮ ಕಲ್ಲಿದ್ದಲು ವ್ಯವಹಾರ ನಡೆಸುತ್ತಿದ್ದ ಆರೋಪ ಹೊತ್ತಿದ್ದಾರೆ. 2021ರ ರಾಜ್ಯ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ್ದರು. ಬಿಜೆಪಿ ನಾಯಕ ರಾಜು ಝಾ ತನ್ನ ಸ್ನೇಹಿತನೊಂದಿಗೆ ಕೋಲ್ಕತ್ತಾಗೆ ಪ್ರಯಾಣಿಸುತ್ತಿದ್ದಾಗ ದಾರಿಯಲ್ಲಿ ಶಕ್ತಿಗಢದಲ್ಲಿ ನಿಲ್ಲಿಸಿದರು. ಅವರ ಕಾರು ಹೆದ್ದಾರಿಯಲ್ಲಿ ನಿಲ್ಲುತ್ತಿದ್ದಂತೆ, ಮತ್ತೊಂದು ಕಾರು ಅದರ ಪಕ್ಕದಲ್ಲಿ ನಿಲ್ಲುತ್ತದೆ. ಕಾರಿನಲ್ಲಿದ್ದವರು ಅವರ ಮೇಲೆ ಮನಸೋ ಇಚ್ಛೆ ಗುಂಡು ಹಾರಿಸಿದ್ದಾರೆ.

ದಾಳಿಯಲ್ಲಿ ರಾಜು ಝಾ ಸಾವನ್ನಪ್ಪಿದ್ದು, ಆತನ ಸ್ನೇಹಿತನಿಗೆ ಬುಲೆಟ್ ಗಾಯಗಳಾಗಿವೆ. ದೃಶ್ಯಾವಳಿಗಳು ವಾಹನದ ಮೇಲೆ ಗುಂಡಿನ ಗುರುತುಗಳನ್ನು ತೋರಿಸುತ್ತವೆ. ಪೊಲೀಸರು ಆತನ ಚಾಲಕನ ಹೇಳಿಕೆಯನ್ನೂ ದಾಖಲಿಸಿಕೊಂಡಿದ್ದಾರೆ. ಇದೊಂದು ದುರದೃಷ್ಟಕರ ಘಟನೆಯಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥ ಕಾಮನಾಶಿಶ್ ಸೇನ್ ತಿಳಿಸಿದ್ದಾರೆ.

ಕೊಲೆಗಾರರನ್ನು ಹೊಂದಿರುವ ವಾಹನವನ್ನು ಗುರುತಿಸಲು ಸ್ಥಳೀಯರನ್ನು ವಿಚಾರಣೆ ನಡೆಸಲಾಗುತ್ತಿದೆ. ಎಲ್ಲಾ ಕೋನಗಳಿಂದಲೂ ತನಿಖೆ ನಡೆಸುತ್ತಿದ್ದು, ಟೋಲ್ ಪ್ಲಾಜಾ ಸೇರಿದಂತೆ ಸಮೀಪದ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!