ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನೀರಿನ ವಿಚಾರ ಬೆಂಗಳೂರು ಬಂದ್ ಕರೆ ನೀಡಲಾಗಿದ್ದು, ಈ ಹಿನ್ನೆಲೆ ಇಂದು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಂಟಾಗುವ ಸಮಸ್ಯೆ ತಡೆಯುವ ಸಲುವಾಗಿ ಬೆಂಗಳೂರು ನಗರದ ಎಲ್ಲ ಶಾಲೆಗಳಿಗೆ ಜಿಲ್ಲಾಧಿಕಾರಿ ದಯಾನಂದ್ ರಜೆ ಘೋಷಣೆ ಮಾಡಿದ್ದಾರೆ. ಮಕ್ಕಳ ಜೊತೆಗೆ ಶಿಕ್ಷಕರು, ಉಪನ್ಯಾಸಕರಿಗೂ ರಜೆ ನೀಡಲಾಗಿದೆ.
ಈ ಕುರಿತು ನಿನ್ನೆ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ (ಡಿಡಿಪಿಐ) ಸೂಚನೆ ನೀಡಿರುವ ಜಿಲ್ಲಾಧಿಕಾರಿ ದಯಾನಂದ್, ಇಂದು ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಜೊತೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ನೀಡಲು ಶಿಫಾರಸ್ಸು ಮಾಡಿದ್ದರಿಂದ ಶಿಕ್ಷಣ ಇಲಾಖೆಯಿಂದ ಅಧಿಕೃತವಾಗಿ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಿದ್ದಾರೆ.
ಬೆಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ
ಇಂದು ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆ ಮಾಡಲಾಗಿದೆ. ಪದವಿಯ 2ನೇ ಹಾಗೂ 4 ನೇ ಸೆಮಿಸ್ಟರ್ ಪರೀಕ್ಷೆಗಳು ನಡೆಯುತ್ತಿದ್ದು, ಇಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಸೆ.27ರಂದು ನಿಗದಿಗೊಳಿಸಿ ಮುಂದೂಡಿಕೆ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾ ವಿಭಾಗದ ಕುಲಸಚಿವರು ಆದೇಶ ಹೊರಡಿಸಿದ್ದಾರೆ.
ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಿದ ರುಪ್ಸಾ
ಬಂದ್ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳಿಗೆ ರುಪ್ಸಾ ಸಂಘಟನೆಯಿಂದ ರಜೆ ಘೋಷಣೆ ಮಾಡಲಾಗಿದೆ.