ಹೊಸದಿಗಂತ ವರದಿ,ಹುಬ್ಬಳ್ಳಿ:
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಸಿ ಸೆ.೨೬ರಂದು ಬೆಂಗಳೂರು ಬಂದ್ ಮಾಡುತ್ತಿರುವ ಹಿನ್ನೆಲೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಯಲದ ಏರ್ಪಡಿಸಿದ್ದ ಪರೀಕ್ಷೆ ಮುಂದೂಡಲಾಗಿದೆ.
ಈ ಕುರಿತು ಪತ್ರಿಕಾ ಪ್ರಕಟಣೆಗೆ ತಿಳಿಸಿದ ವಿಶ್ವವಿದ್ಯಾಲಯವು, ಕರ್ನಾಟಕ ಕಾನೂನು ವಿಶ್ವವಿದ್ಯಾಯಲದ ಅಡಿಯಲ್ಲಿ ಬರುವ ಎಲ್ಲ ಕಾಲೇಜುಗಳು ಪರೀಕ್ಷೆಯನ್ನು ಮುಂದೂಡಲಾಗಿದ್ದು, ಈ ಪರೀಕ್ಷೆಗಳನ್ನು ಅಕ್ಟೋಬರ್ ೮ರಂದು ನಡೆಸಲು ನಿರ್ಧರಿಸಿದೆ.