ನಾಳೆ ಬೆಂಗಳೂರು ಬಂದ್​: ನಮ್ಮ ಮೆಟ್ರೋ ಕಥೆ ಏನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕಾವೇರಿ ನೀರು ವಿಚಾರ ನಾಳೆ (ಸೆಪ್ಟೆಂಬರ್ 26) ರಾಜ್ಯ ರಾಜಧಾನಿ ಬೆಂಗಳೂರು ಬಂದ್​ಗೆ (Bangalore Bandh) ಕರೆ ನೀಡಲಾಗಿದೆ. ಬಿಎಂಟಿಸಿ ಬಸ್​ಗಳು ಪರಿಸ್ಥಿತಿ ನೋಡಿಕೊಂಡು ಸಂಚಾರ ಆರಂಭಿಸಲಿವೆ. ಆದರೆ ನಾಳೆ ನಮ್ಮ ಮೆಟ್ರೋ ಸೇವೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬಿಎಂಅರ್​ಸಿಎಲ್ (BMRCL) ತಿಳಿಸಿದೆ.

ಈ ಬಗ್ಗೆ ಮಾಹಿತಿ ನೀಡಿದ ಬಿಎಂಆರ್​ಸಿಎಲ್ ಅಧಿಕಾರಿಗಳು, ನಾಳೆ ನಮ್ಮ ಮೆಟ್ರೋ ಸೇವೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ದೈನಂದಿನಂತೆ ನಮ್ಮ ಮೇಟ್ರೋ ಸಂಚಾರ ಇರಲಿದೆ. ಸಂದರ್ಭಕ್ಕೆ ತಕ್ಕಂತೆ ಮೇಟ್ರೋ ಕಾರ್ಯಚರಣೆ ನಡೆಸಲಿದೆ. ಅದಾಗ್ಯೂ, ಸ್ಥಿತಿಗತಿಯ ಮೇಲೆ ಮೇಟ್ರೋ ಸಂಚಾರದ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದಿದ್ದಾರೆ.

ಸೆಪ್ಟೆಂಬರ್ 26 ರಂದು ಬೆಂಗಳೂರು ಬಂದ್ ​ಗೆ ಆಟೋ, ಓಲಾ, ಊಬರ್, ಖಾಸಗಿ ಬಸ್​ ಮಾಲೀಕರ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿದ್ದವು. ಈ ಪೈಕಿ ಆಟೋ, ಓಲಾ, ಊಬರ್ ಸಂಘಟನೆಗಳು ಬೆಂಬಲ ವಾಪಸ್ ಪಡೆದಿದ್ದು, ಸೆ.29ರ ಕರ್ನಾಟಕ ಬಂದ್​ಗೆ ಸಂಪೂರ್ಣ ಬೆಂಬಲ ನೀಡಲು ನಿರ್ಧರಿಸಿವೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!