ಬೆಂಗಳೂರು ಬಂದ್ ಶಾಂತಿಯುತವಾಗಿ ನಡೆದಿದೆ, ನಾಗರಿಕರಿಗೆ ನನ್ನ ಅಭಿನಂದನೆ: ಡಿಕೆ ಶಿವಕುಮಾರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಂಗಳೂರು ಬಂದ್ ಶಾಂತಿಯುತವಾಗಿ ನಡೆದಿದ್ದು, ಇದಕ್ಕಾಗಿ ಬೆಂಗಳೂರು ನಾಗರಿಕರಿಗೆ ನನ್ನ ಅಭಿನಂದನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆಶಿ, ಪ್ರತಿಭಟನೆ ಮಾಡಲಿ. ಅವರ ಧ್ವನಿ, ಹೋರಾಟ ನಡೆಯಲಿ. ಎಲ್ಲರೂ ಸಹಕಾರ ಕೊಟ್ಟಿದ್ದಾರೆ. ಸಂಘಟನೆಯವರಿಗೆ ಅಭಿನಂದನೆಗಳು ಎಂದರು.

ಬಿಜೆಪಿ-ಜೆಡಿಎಸ್ ಕಾವೇರಿ ಹೋರಾಟದಲ್ಲಿ ಭಾಗಿಯಾಗಿರುವ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜಕಾರಣ ಬಿಡಿ. ರಾಜ್ಯದ ಹಿತ ಕಾಪಾಡಲು ಮುಂದಾಗಲಿ ಎಂದರು. ಇದು ಸ್ಟಾಲಿನ್ ಸರ್ಕಾರ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿ, ಅವರ ತಂದೆಯವರು ಏನು ಹೇಳಿದ್ದಾರೆ ಅದನ್ನು ಮೊದಲು ಅರ್ಥ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!