ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ ಬೆನ್ನಲ್ಲೇ ಡಿಎನ್ಎ ಇವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆಯ ಮೂವರು ಹಾಗೂ ಆರ್ಸಿಬಿ ಮಾರ್ಕೆಟಿಂಗ್ ಹೆಡ್ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಡಿಎನ್ಎ ಇವೆಂಟ್ ಮ್ಯಾನೇಜ್ಮೆಂಟ್ನ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ವಿನೋದ್, ಆರ್ಸಿಬಿ ಮಾರ್ಕೆಟಿಂಗ್ ಹೆಡ್ ನಿಖಿಲ್ ಬಂಧಿತರು.
ಇನ್ನೂ ಕೆಎಸ್ಸಿಎ ಪ್ರಮುಖರೆಲ್ಲಾ ನಿನ್ನೆ ರಾತ್ರಿಯೇ ಎಸ್ಕೇಪ್ ಆಗಿದ್ದು, ಅವರ ಮನೆಗಳಿಗೂ ತೆರಳಿ ಪೊಲೀಸರು ಹುಡುಕಾಟ ನಡೆಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.