ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಶುಕ್ರವಾರ ನಡೆಯಿತು. ಬೆಂಗಳೂರಿನಲ್ಲಿ ಪ್ರತಿ ಬಾರಿಯಂತೆ ಕಡಿಮೆ ಮತದಾನವಾಗಿದೆ. ಇದರಿಂದ ಆಕ್ರೋಶಗೊಂಡ ಕೆಲವರು ಮತದಾನ ಮಾಡದವರು ಬದುಕಿದ್ದು ಸತ್ತಂತೆ ಅಂತ ರಸ್ತೆ ಬದಿಗಳಲ್ಲಿ ಬ್ಯಾನರ್ ಹಾಕಿದ್ದಾರೆ.
ಚುನಾವಣಾ ಆಯೋಗ ಅಷ್ಟೊಂದು ಪ್ರಚಾರ ಮಾಡಿದ ನಂತರವೂ ಮತದಾನದಿಂದ ದೂರ ಉಳಿದು ಬದುಕಿದ್ದರೂ ಸತ್ತಂತೆ ವರ್ತಿಸಿದ ಬೆಂಗಳೂರು ನಗರದ ಸುಶಿಕ್ಷತ ಸತ ಪ್ರಜೆಗಳಿಗೆ ನಮ್ಮ ಶ್ರದ್ಧಾಂಜಲಿಗಳು ಎಂದು ಬ್ಯಾನರ್ ಹಾಕಿದ್ದಾರೆ.
ಈ ಬ್ಯಾನರ್ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ಪೋಸ್ಟರ್ ಹಾಕಿದ್ದು ಯಾರು ಎನ್ನುವ ಬಗ್ಗೆ ಮಾಹಿತಿ ಇಲ್ಲ.