“ಮತದಾರರು ತಪ್ಪು ಮಾಡಿದ್ರೆ ಉತ್ತರ ಪ್ರದೇಶ ಕ್ಷಣ ಮಾತ್ರದಲ್ಲಿ ಬಂಗಾಳ, ಕಾಶ್ಮೀರವಾಗುತ್ತದೆ”

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಂದು ನಡೆಯುತ್ತಿರುವ ಚುನಾವಣಾ ಮತದಾರರು ತಪ್ಪು ಮಾಡಿದ್ರೆ ಉತ್ತರಪ್ರದೇಶ ಕೂಡ ಕಾಶ್ಮೀರ, ಕೇರಳ ಅಥವಾ ಪಾಶ್ಚಿಮ ಬಂಗಾಳದಂತೆ ಆಗುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ.

ಇಂದು ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯ ನಡೆಯುತ್ತಿದ್ದು, ಈ ವೇಳೆ ಟ್ವಿಟರ್‌ ನಲ್ಲಿ ಯೋಗಿ ಆದಿತ್ಯನಾಥ್‌ ಅವರು ಮಾತನಾಡಿರುವ ವಿಡಿಯೋವನ್ನು ಬಿಜೆಪಿ ಉತ್ತರ ಪ್ರದೇಶ ಹಂಚಿಕೊಂಡಿದೆ.

ಈ ವಿಡಿಯೋದಲ್ಲಿ ಯೋಗಿ ಆದಿತ್ಯನಾಥ್‌ ಅವರು, ಬಿಜೆಪಿಗೆ ಮತ ಹಾಕಿ ನೀವು ಗೆಲ್ಲಿಸಿದರೆ ಮುಂದಿನ ದಿನಗಳಲ್ಲಿ ಭಯ ಮುಕ್ತ ಜೀವನ ನಡೆಸಲು ಸಾಧ್ಯವಾಗುತ್ತದೆ. ಕಳೆದ 5 ವರ್ಷಗಳಿಂದ ರಾಜ್ಯದಲ್ಲಿ ಅಭಿವೃದ್ದಿ ಕೆಲಸಗಳನ್ನು ಮಾಡಿದ್ದು, ನಮ್ಮ ಶ್ರಮಕ್ಕೆ ನಿಮ್ಮ ಮತವೇ ವರವಾಗಲಿದೆ. ನಿಮ್ಮ ಮತ, ನಿಮ್ಮ ಭಯ ಮುಕ್ತ ಬದುಕಿಗಾಗಿ ಎಂದು ಖಚಿತಪಡಿಸಿಕೊಳ್ಳಿ. ಇಂದು ಅತಿ ದೊಡ್ಡ ನಿರ್ಧಾರ ಕೈಗೊಳ್ಳುವ ದಿನ ಎಂದಿದ್ದಾರೆ.

ರಾಜ್ಯದಲ್ಲಿ ಕಳೆದ 5 ವರ್ಷದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದು, ಮತದಾರರು ಸ್ವಲ್ಪ ತಪ್ಪಿದರೂ ಕೂಡ ಈ 5 ವರ್ಷದ ಶ್ರಮ ಹಾಳಾಗುತ್ತದೆ. ಇದಕ್ಕೆ ಹೆಚ್ಚು ಸಮಯ ಬೇಕಾಗಿಲ್ಲ, ಕ್ಷಣ ಮಾತ್ರದಲ್ಲಿ ಉತ್ತರ ಪ್ರದೇಶ, ಕಾಶ್ಮೀರ, ಬಂಗಾಳ ಅಥವಾ ಕೇರಳ ರಾಜ್ಯಗಳಂತಾಗುತ್ತದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!