ಮಾ.​​16ರಂದು ಪಂಜಾಬ್​​ನ ನೂತನ ಸಿಎಂ ಆಗಿ ಭಗವಂತ್‌ ಮನ್‌ ಪದಗ್ರಹಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪಂಜಾಬ್​​ನಲ್ಲಿ 92 ವಿಧಾನಸಭಾ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ದಾಖಲು ಮಾಡುವ ಮೂಲಕ ನೂತನ ಸರ್ಕಾರ ರಚನೆ ಮಾಡಲು ಸಿದ್ಧವಾಗುತ್ತಿರುವ ಆಪ್ ನ ನಿಯೋಜಿತ ಸಿಎಂ ಭಗವಂತ್‌ ಮನ್‌ ಮಾ.​​16ರಂದು ಪದಗ್ರಹಣಕ್ಕೆ ಸಕಲ ಸಿದ್ಧತೆ ನಡೆಸುತ್ತಿದ್ದಾರೆ.
ದೆಹಲಿಯಲ್ಲಿಂದು ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್​ ಹಾಗೂ ಮನೀಷ್ ಸಿಸೋಡಿಯಾ ಅವರನ್ನು ಭೇಟಿ ಮಾಡಿರುವ ಭಗವಂತ್ ಮನ್​​ ಪದಗ್ರಹಣ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
ಮಾರ್ಚ್​​ 13ರಂದು ಅಮೃತ​ಸರದಲ್ಲಿ ಬೃಹತ್ ರೋಡ್ ಶೋ ನಡೆಸಲು ನಿರ್ಧರಿಸಲಾಗಿದೆ. ಇದರಲ್ಲಿ ಅರವಿಂದ್ ಕೇಜ್ರಿವಾಲ್​​ ಭಾಗಿಯಾಗಲಿದ್ದಾರೆ ಎಂದು ಅವರು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!