ಹೊಸದಿಗಂತ ಡಿಜಿಟಲ್ ಡೆಸ್ಕ್
ಪಂಜಾಬ್ನಲ್ಲಿ ನೂತನ ಸರಕಾರ ರಚಿಸಿದ ಸಿಎಂ ಭಗವಂತ್ ಮಾನ್ ನೇತೃತ್ವದ ತಂಡ ಇದೀಗ ಹೊಸ ನಿರ್ಧಾರ ಕೈಗೊಂಡಿದೆ.
ಈಗಾಗಲೇ ಭ್ರಷ್ಟಾಚಾರ ತಡೆಗೆ ಭ್ರಷ್ಟಾಚಾರ ವಿರೋಧಿ ಸಹಾಯವಾಣಿ ಆರಂಭ ಮಾಡಿರುವ ಆಮ್ ಆದ್ಮಿ, ಇಂದಿನ ಚೊಚ್ಚಲ ಸಚಿವ ಸಂಪುಟದಲ್ಲಿ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ.
ಇಂದು ಬೆಳಗ್ಗೆ 10 ಶಾಸಕರು ಸಚಿವರಾಗಿ ಸೇರ್ಪಡೆಯಾಗಿದ್ದು, ಇದರ ಬೆನ್ನಲ್ಲೇ ಅವರೊಂದಿಗೆ ಚೊಚ್ಚಲ ಸಚಿವ ಸಂಪುಟ ಸಭೆ ನಡೆಸಲಾಯಿತು.ಈ ವೇಳೆ, ಪಂಜಾಬ್ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 10 ಸಾವಿರ ಹುದ್ದೆ ಹಾಗೂ ಇತರೆ ಇಲಾಖೆಯಲ್ಲಿನ 15 ಸಾವಿರ ಹುದ್ದೆ ಸೇರಿ ಒಟ್ಟು 25 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿ ಪ್ರಸ್ತಾವನೆಯನ್ನ ಕ್ಯಾಬಿನೆಟ್ನಲ್ಲಿ ಅಂಗೀಕಾರ ಮಾಡಲಾಗಿದೆ.
ಈಗಾಗಲೇ ಕಾರ್ಯೋನ್ಮುಖರಾಗಿರುವ ಭಗವಂತ್ ಮಾನ್, ರಾಜ್ಯದ ಮಾಜಿ ಸಚಿವರು, ಶಾಸಕರು ತಾವು ಉಳಿದುಕೊಂಡಿರುವ ಸರ್ಕಾರಿ ಬಂಗಲೆ, ಫ್ಲ್ಯಾಟ್ ಖಾಲಿ ಮಾಡುವಂತೆ ಸೂಚನೆ ನೀಡಿದ್ದಾರೆ.ರಾಜ್ಯದಲ್ಲಿನ ವಿಐಪಿ ಸಂಸ್ಕೃತಿ ತೆಗೆದು ಹಾಕುವ ಉದ್ದೇಶದಿಂದ ಪ್ರಮುಖರಿಗೆ ನೀಡಲಾಗಿದ್ದ ಭದ್ರತೆ ವಾಪಸ್ ಪಡೆದುಕೊಂಡಿದ್ದಾರೆ.