ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಫಿಲಂ ಚೇಂಬರ್ ಮಾಜಿ ಅಧ್ಯಕ್ಷ, ನಿರ್ಮಾಪಕ ಭಾಮಾ ಹರೀಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪುತ್ರ ಉಲ್ಲಾಸ್ ತಿಳಿಸಿದ್ದಾರೆ.
ನಿನ್ನೆ (ಮಾರ್ಚ್ 27) ಭಾಮಾ ಹರೀಶ್ ಹೃದಯ ಬಡಿತ ಇದ್ದಕ್ಕಿದ್ದಂತೆ ಹೆಚ್ಚಾದ ಕಾರಣ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ವೈದ್ಯರು ಅಂಜಿಯೋಗ್ರಾಮ್ ಪರೀಕ್ಷೆ ನಡೆಸಿದ್ದು. ಮುಂದಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಭಾಮಾ ಅವರ ಪುತ್ರ ಹರೀಶ ಉಲ್ಲಾಸ್ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಭಾಮಾ ಹರೀಶ್ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ದರ್ಶನ್ ಅಭಿನಯದ ಮೆಜೆಸ್ಟಿಕ್ ಸೇರಿದಂತೆ ಹಲವು ಚಿತ್ರಗಳನ್ನು ನಿರ್ಮಿಸಿದ್ದಾರೆ.