ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ್ ಜೋಡೊ ನ್ಯಾಯ ಯಾತ್ರೆ ಉತ್ತರ ಪ್ರದೇಶದ ಆಗ್ರಾ ತಲುಪಿದ್ದು, ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಸಾಥ್ ನೀಡಿದ್ದಾರೆ.
ಇದೇ ವೇಳೆ ಮಾತನಾಡಿದ ಅವರು, ‘ಇಂದು ರೈತರು ಸರ್ಕಾರದ ವಿರುದ್ಧ ನಿಂತಿದ್ದಾರೆ, ಸರ್ಕಾರ ರೈತರ ಶಕ್ತಿಗೆ ಹೆದರುತ್ತಿದೆ, ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ತೊಲಗಿಸಿ ‘ಇಂಡಿಯಾ’ ಒಕ್ಕೂಟದ ಸಮ್ಮಿಶ್ರ ಸರ್ಕಾರ ರೈತರಿಗೆ ಗೌರವ ನೀಡುತ್ತದೆ.ಹಿಂದುಳಿದ ವರ್ಗಗಳು, ದಲಿತರು ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ ನೀಡಬೇಕಾದ ಗೌರವವನ್ನು ಬಿಜೆಪಿ ನೀಡಿಲ್ಲ’ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ಒಪ್ಪಂದವಾಗಿ ಕೆಲವು ದಿನಗಳಾಗಿದ್ದು, ಈ ನಡುವೆ, ಅಖಿಲೇಶ್ ಯಾದವ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ. ಎರಡು ಪಕ್ಷಗಳ ನಡುವಿನ ಒಪ್ಪಂದವನ್ನು ಅಂತಿಮಗೊಳಿಸಲು ಸಹಾಯ ಮಾಡಿದ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಇಂದು ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.