ಜ.30ರಂದು ಶ್ರೀನಗರದಲ್ಲಿ ಭಾರತ್ ಜೋಡೋ ಸಮಾರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಜನವರಿ 30ಕ್ಕೆ ಕೊನೆಗೊಳ್ಳಲಿದೆ.

ಶ್ರೀನಗರದಲ್ಲಿ ಯಾತ್ರೆ ಕೊನೆಯಾಗಲಿದ್ದು, ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿದೆ. ಇದರಲ್ಲಿ ಭಾಗಿಯಾಗಲು ಸಮಾನ ಮನಸ್ಕ 21 ಪಕ್ಷಗಳಿಗೆ ಆಹ್ವಾನ ನೀಡಲಾಗಿದೆ.

ಜ.30ರ ಮಧ್ಯಾಹ್ನ ಶ್ರೀನಗರದಲ್ಲಿ ಭಾರತ್ ಜೋಡೋ ಸಮಾರೋಪ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿ. ಮಹಾತ್ಮ ಗಾಂಧಿಯವರ ಸ್ಮರಣೆಗೆ ಈ ದಿನವನ್ನು ಸಮರ್ಪಿಸಲಾಗಿದೆ. ಸತ್ಯ ಮತ್ತು ಅಹಿಂಸೆಯನ್ನು ಹರಡೋಣ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಹ್ವಾನ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!