ಭಾರತ್ ಜೋಡೋ ಯಾತ್ರೆ ಆಯಿತು ಇನ್ನು ‘ಹತ್ ಸೇ ಹಾತ್ ಜೋಡೋ ಅಭಿಯಾನ’ ಎಂದ ಕಾಂಗ್ರೆಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಭಾರತ್ ಜೋಡೋ ಯಾತ್ರೆ ಮುಗಿದ ಬೆನ್ನೆಲ್ಲೇ ಕಾಂಗ್ರೆಸ್ ಮತ್ತೊಂದು ಯಾತ್ರೆ ನಡೆಸಲು ಮುಂದಾಗಿದ್ದು, ಈ ಕುರಿತು ಇಂದು ನಡೆದ ಕಾಂಗ್ರೆಸ್ ಪಕ್ಷದ ಸಂಚಾಲನಾ ಸಮಿತಿ ಸಭೆಯಲ್ಲಿ ಚರ್ಚಿಸಲಾಗಿದೆ.

ಜನವರಿ 26 ರಿಂದ ‘ಹತ್ ಸೆ ಹತ್ ಜೋಡೋ ಅಭಿಯಾನ’ ನಡೆಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಅಭಿಯಾನ ಎರಡು ತಿಂಗಳ ಸುದೀರ್ಘ ಕಾಲ ನಡೆಸಲಿದೆ ಎಂದು ಪಕ್ಷ ತಿಳಿಸಿದೆ.

ಅದಲ್ಲದೆ ಕಾಂಗ್ರೆಸ್ ಸರ್ವಸದಸ್ಯರ ಅಧಿವೇಶನ ಫೆಬ್ರವರಿಯ ದ್ವಿತೀಯಾರ್ಧದಲ್ಲಿ ಛತ್ತೀಸ್‌ಗಢದ ರಾಯ್‌ಪುರದಲ್ಲಿ 3 ದಿನ ನಡೆಯಲಿದೆ ಎಂದು ಕಾಂಗ್ರೆಸ್ ಸಂಸದ ಕೆಸಿ ವೇಣುಗೋಪಾಲ್ ಹೇಳಿದ್ದಾರೆ.

ಅದಲ್ಲದೆ ಸಂ ಭಾರತ್ ಜೋಡೋ ಯಾತ್ರೆಯಲ್ಲಿ ತೊಡಗಿರುವ ಕಾರಣ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!