ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ರತ್ನ (Bharat Ratna) ಪುರಸ್ಕೃತ ಬಿಹಾರದ ಮಾಜಿ ಮುಖ್ಯಮಂತ್ರಿ ದಿವಂಗತ ಕರ್ಪೂರಿ ಠಾಕೂರ್ (Karpoori Thakur) ಅವರ ಕುಟುಂಬ ಸದಸ್ಯರನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಸೋಮವಾರ ಭೇಟಿಯಾದರು.
ಸಮಾಜವಾದಿ ನಾಯಕನ ಕುಟುಂಬ ಸದಸ್ಯರು, ಅವರ ಪುತ್ರ ರಾಜ್ಯಸಭಾ ಸದಸ್ಯ ಮತ್ತು ಜೆಡಿಯು ನಾಯಕ ರಾಮ್ ನಾಥ್ ಠಾಕೂರ್ ನೇತೃತ್ವದಲ್ಲಿ ಪ್ರಧಾನ ಮಂತ್ರಿಯನ್ನು ಅವರ 7, ಲೋಕ ಕಲ್ಯಾಣ್ ಮಾರ್ಗ್ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.
ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಜನನಾಯಕ್ ಕರ್ಪೂರಿ ಠಾಕೂರ್ ಅವರ ಕುಟುಂಬದ ಸದಸ್ಯರನ್ನು ಭೇಟಿಯಾಗಲು ತುಂಬಾ ಸಂತೋಷವಾಗಿದೆ. ಕರ್ಪೂರಿ ಜಿ ಅವರು ಸಮಾಜದ ಹಿಂದುಳಿದ ಮತ್ತು ವಂಚಿತ ವರ್ಗಗಳ ಮಿಸಾಯ ಆಗಿದ್ದಾರೆ, ಅವರ ಜೀವನ ಮತ್ತು ಆದರ್ಶಗಳು ದೇಶವಾಸಿಗಳಿಗೆ ಸ್ಫೂರ್ತಿ ನೀಡುವುದು ಎಂದು ಪ್ರಧಾನಿ ಹೇಳಿದರು.
ರಾಮ್ ನಾಥ್ ಠಾಕೂರ್ ಅವರು ತಮ್ಮ ಕುಟುಂಬದ ಪರವಾಗಿ, ಬಿಹಾರದ ಪರವಾಗಿ ಮತ್ತು ದಮನಿತರು, ದಲಿತರು ಮತ್ತು ಹಿಂದುಳಿದ ಸಮುದಾಯಗಳ ಪರವಾಗಿ ಈ ಗೌರವಕ್ಕಾಗಿ ಪ್ರಧಾನಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದರು. ಎರಡನೇ ದೀಪಾವಳಿಯಂತೆಯೇ ಇದು ನಮಗೆ ಸಂತೋಷದ ಕ್ಷಣವಾಗಿತ್ತು. ಪಟಾಕಿ ಸಿಡಿಸಿ ಸಿಹಿ ಹಂಚಲಾಯಿತು ಎಂದು ಮಾಜಿ ಮುಖ್ಯಮಂತ್ರಿ ಮೊಮ್ಮಗ ರಂಜಿತ್ ಕುಮಾರ್ ಹೇಳಿದ್ದಾರೆ.
ಕರ್ಪೂರಿ ಠಾಕೂರ್ ಅವರು ಡಿಸೆಂಬರ್ 1970 ರಿಂದ ಜೂನ್ 1971 ರವರೆಗೆ ಮತ್ತು ಡಿಸೆಂಬರ್ 1977 ರಿಂದ ಏಪ್ರಿಲ್ 1979 ರವರೆಗೆ ಬಿಹಾರದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.