BIG NEWS | ಎಲ್. ಕೆ. ಅಡ್ವಾಣಿ ಮುಡಿಗೆ ದೇಶದ ಅತ್ಯುನ್ನತ ಗೌರವ ಭಾರತ ರತ್ನದ ಗರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರಿಗೆ ದೇಶದ ಪರಮೋಚ್ಛ ಗೌರವ ‘ಭಾರತ ರತ್ನ’ ನೀಡಿ ಗೌರವಿಸಲಾಗುವುದು ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ.

ಎಲ್ ಕೆ ಅಡ್ವಾಣಿಯವರಿಗೆ ಭಾರತ ರತ್ನ ಪ್ರಶಸ್ತಿ ಗೌರವ ನೀಡಿರುವ ವಿಚಾರವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಹಳ ಸಂತಸವಾಗುತ್ತಿದೆ. ಈ ಕುರಿತು ನಾನು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ವಿಷಯ ಹಂಚಿಕೊಂಡಿದ್ದು ಅದನ್ನು ಕೇಳಿ ಅವರು ಬಹಳ ಖುಷಿಪಟ್ಟರು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಅಡ್ವಾನಿ ಅವರು ಒಬ್ಬರು, ಭಾರತದ ಏಳಿಗೆಗೆ ಅವರ ಕೊಡುಗೆ ಅಸಮಾನ್ಯವಾದ್ದು ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!