ಭೂತಕೋಲ ಹಿಂದೂಗಳದ್ದಲ್ಲ: ಮತ್ತೆ ಸಮರ್ಥನೆ ಮಾಡಿಕೊಂಡ ನಟ ಚೇತನ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭೂತಕೋಲ ಆಚರಣೆ ಹಿಂದೂ ಸಂಸ್ಕೃತಿಯ ಭಾಗವೇ ಆಗಿದೆ ಎಂದು ರಿಷಭ್ ಶೆಟ್ಟಿ ಹೇಳಿದ್ದು, ಈ ಹೇಳಿಕೆಯನ್ನು ನಟ ಚೇತನ್ ಅಲ್ಲಗಳೆದಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ನೀಡಲು ನಟ ಚೇತನ್ ಸುದ್ದಿಗೋಷ್ಠಿ ಕರೆದು ಮಾತನಾಡಿದ್ದಾರೆ. ಹಿಂದಿ ಹೇರಿಕೆ ಹೇಗೆ ಒಪ್ಪೋಕೆ ಆಗೋದಿಲ್ವೋ ಅದೇ ರೀತಿ ಹಿಂದುತ್ವ ಹೇರಿಕೆಯನ್ನು ಒಪ್ಪೋಕೆ ಆಗೋದಿಲ್ಲ. ಧರ್ಮ ಹಾಗೂ ಜಾತಿಗಳಲ್ಲಿ ವಿವಿಧತೆ ಇದೆ. ಹಿಂದೂ ಬೇರೆ ಹಿಂದುತ್ವವೇ ಬೇರೆ. ಭೂತಕೋಲ ಮೂಲ ನಿವಾಸಿಗಳ ಆಚರಣೆ. ಕೇವಲ ಹಿಂದು ಧರ್ಮದ್ದಲ್ಲ. ಎಲ್ಲ ಆಚರಣೆಗಳನ್ನು ಗೌರವಿಸಿ ಎಂದು ಚೇತನ್ ಹೇಳಿದ್ದಾರೆ.

ಕಾಂತಾರ ಸಿನಿಮಾ ಭರ್ಜರಿ ಯಶಸ್ಸು ಗಳಿಸಿದ್ದು, ದೇಶವೇ ಇತ್ತ ತಿರುಗಿ ನೋಡುವಂತೆ ಮಾಡಿದೆ. ಈ ಸಿನಿಮಾಗೆ ಎಲ್ಲಿಯೂ ಮಿಶ್ರ ಪ್ರತಿಕ್ರಿಯೆ ಕೂಡ ಎದುರಾಗಿಲ್ಲ. ಪ್ರತಿಯೊಬ್ಬರೂ ಸಿನಿಮಾ ನೋಡಿ ಮೆಚ್ಚಿದ್ದಾರೆ. ರಿಷಭ್ ಶೆಟ್ಟಿ ಹೇಳಿಕೆಯನ್ನು ಒಪ್ಪದ ಚೇತನ್ ಇದೀಗ ಪರ ವಿರೋಧ ಚರ್ಚೆಗೆ ವೇದಿಕೆ ಮಾಡಿಕೊಟ್ಟಿದ್ದು, ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!