ಹೊಸದಿಗಂತ ವರದಿ, ಬೀದರ್
ಔರಾದ್ ತಾಲ್ಲೂಕಿನ ಆಲೂರು ಗ್ರಾಮದ ಶತಾಯುಷಿ ಅಪ್ಪಾರಾವ್ ರಾಮಶೆಟ್ಟಿ ಜಾಬಾ (104) ಸೋಮವಾರ ನಸುಕಿನ ಜಾವ ನಿಧನರಾದರು.
ಅವರಿಗೆ ಪತ್ನಿ, ಲಾಧಾ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶಿವಾನಂದ ಜಾಬಾ ಸೇರಿ ಮೂವರು ಪುತ್ರರು ಹಾಗೂ ಒಬ್ಬರು ಪುತ್ರಿ ಇದ್ದಾರೆ. ಸ್ವಗ್ರಾಮದ ಅವರ ಹೊಲದಲ್ಲಿ ಅಂತ್ಯಕ್ರಿಯೆ ನೆರವೇರಿತು.
ಸಂತಾಪ: ಅಪ್ಪಾರಾವ್ ಜಾಬಾ ಅವರ ನಿಧನಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ ಸಂತಾಪ ವ್ಯಕ್ತಪಡಿಸಿದ್ದಾರೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ