ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ಮೈತ್ರಿ ಸರ್ಕಾರ ನಾಳೆ ವಿಶ್ವಾಸಮತಯಾಚನೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶ ಬೆನ್ನೆಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದಾರೆ.
ವಿಶ್ವಾಸಮತಯಾಚನೆ ನಡೆಸಲು ರಾಜ್ಯಪಾಲರು ನೀಡಿರುವ ನಿರ್ಧಾರ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಠಾಕ್ರೆ ಗೆ ಭಾರೀ ಹಿನ್ನೆಡೆಯಾಗಿದ್ದು, ಇದಾದ ಬಳಿಕ ಸುದ್ದಿಗೋಷ್ಠಿ ಕರೆದು ರಾಜೀನಾಮೆ ಘೋಷಿಸಿದ್ದಾರೆ. ಈ ಮೂಲಕ ಎರಡೂವರೆ ವರ್ಷದ ‘ಮಹಾ ವಿಕಾಸ್ ಅಘಾಡಿ’ ಸರಕಾರದ ಆಡಳಿತ ಅಂತ್ಯವಾಗಿದೆ.