ಡಿ.18 ರಂದು ರಾಜ್ಯಮಟ್ಟದ ಬಿಜೆಪಿ ಪ್ರಕೋಷ್ಠಗಳ ಬೃಹತ್ ಸಭೆ: ಡಾ.ಪ್ರಕಾಶ ಜೆ.ಪಿ.

ಹೊಸದಿಗಂತ ವರದಿ, ಬಾಗಲಕೋಟೆ:
ಬಿಜೆಪಿಯ ರಾಜ್ಯ ಪ್ರಕೋಷ್ಟಗಳ ಬೃಹತ್ ಸಭೆ ಡಿ.18 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಕೋಷ್ಠ ಸಹ ಸಂಚಾಲಕ ಡಾ.ಪ್ರಕಾಶ ಜೆ.ಪಿ. ತಿಳಿಸಿದರು.
ನವನಗರದ ಪತ್ರಿಕಾಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆಯುವ ಪ್ರಕೋಷ್ಠಗಳ ಬೃಹತ್ ಸಭೆಯನ್ನು ರೈಲ್ವೆ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಕೇಂದ್ರ ಸಚಿವ ಅಶ್ಚಿನಿ ವೈಷ್ಣವ್ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಹಿಸುವರು.‌ ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉಪಸ್ಥಿತರಿರುವರು.
ಸಮಾರೋಪ ಭಾಷಣವನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮಾಡಲಿದ್ದಾರೆ ಎಂದರು.
ರಾಜ್ಯಮಟ್ಟದ ಪ್ರಕೋಷ್ಠ ಸಭೆಯಲ್ಲಿ ವೈದ್ಯಕೀಯ, ಕಾನೂನು, ನೇಕಾರ, ಮೀನುಗಾರಿಕೆ ಸೇರಿದಂತೆ 24 ಪ್ರಕೋಷ್ಠಗಳ ಪದಾಧಿಕಾರಿಗಳು, ಕಾರ್ಯಕರ್ತರು ಸಭೆಯಲ್ಲಿ‌ ಭಾಗ ವಹಿಸುತ್ತಿದ್ದು 15,೦೦೦ ಜನರು ಭಾಗವಹಿಸಲಿದ್ದಾರೆ ಎಂದರು.
ಮುಂಬರುವ ವಿಧಾನಸಭೆಯ ಚುನಾವಣೆಗೆ ಭಾರತೀಯ ಜನತಾ ಪಕ್ಷವನ್ನು ಪ್ರತಿ ಹಂತದಲ್ಲಿ‌ ಸಂಘಟಿಸುವ ಮೂಲಕ ಪ್ರಕೋಷ್ಠಗಳನ್ನು ಸಿದ್ದಪಡಿಸಲಾಗುತ್ತದೆ ಎಂದು ಹೇಳಿದರು.
ಮೀನುಗಾರರ ಪ್ರಕೋಷ್ಠದ ನಾಗಪ್ಪ ಅಂಬಿ ಮಾತನಾಡಿ, ಜಿಲ್ಲೆಯಿಂದ 600 ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸುವರು ಎಂದು ಹೇಳಿದರು. ಬೆಳಗಾವಿ ಸಹ ಪ್ರಭಾರಿ ಬಸವರಾಜ ಯಂಕಂಚಿ ಮಾತನಾಡಿ, ಡಿ.15 ರಂದು ನವನಗರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಬಿಜೆಪಿ ಕಚೇರಿಯ ಉದ್ಘಾಟನೆಯನ್ನು ವರ್ಚುವಲ್ ಮೂಲಕ ಕೊಪ್ಪಳದ ಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಉದ್ಘಾಟಿಸುವರು. ಉದ್ಘಾಟನೆ ನಿಮಿತ್ತ ಗೋಮಾತೆಯ ಪೂಜೆ, ಹೋಮ‌ ಹವನ ನಡೆಯಲಿದೆ ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ಜಿಲ್ಲಾ ವಕ್ತಾರ ಸತ್ಯನಾರಾಯಣ ಹೇಮಾದ್ರಿ, ಜಿಲ್ಲಾ ಮಾಧ್ಯಮ ಸಂಚಾಲಕ ನರೇಂದ್ರ ಕುಪ್ಪಸ್ತ, ವೆಂಕಟೇಶ ರಂಗಣ್ಣನವರ ಪತ್ರಿಕಾಗೋಷ್ಠಿ ಯಲ್ಲಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!