ಹೊಸದಿಗಂತ ಡಿಜಿಟಲ್ ಡೆಸ್ಕ್:
(ಮೂಲ ವರದಿಯನ್ನು ಅಪ್ಡೇಟ್ ಮಾಡಲಾಗಿದೆ)
ಚಂದನ್ ಸಾವು ಯುದ್ಧದ ಕಾರಣದಿಂದಲ್ಲ, ಆರೋಗ್ಯಕಾರಣದಿಂದ ಹಾಗೂ ಅವರ ಕುಟುಂಬ ಸದಸ್ಯರೂ ಉಕ್ರೇನಿನಲ್ಲಿದ್ದಾರೆ ಎಂದು ಭಾರತದ ವಿದೇಶ ವ್ಯವಹಾರ ಸಚಿವಾಲಯದ ವಕ್ತಾರರು ಹೇಳಿದ್ದಾರೆ.
#Watch | Chandan Jindal, an Indian national in Ukraine's Vinnytsia lost his life due to natural causes. His family members are also in Ukraine: Arindam Bagchi, MEA spokesperson pic.twitter.com/zeH0V9k124
— ANI (@ANI) March 2, 2022
ಯುದ್ದಪೀಡಿತ ಉಕ್ರೇನ್ನಲ್ಲಿ ಭಾರತದ ಇನ್ನೊಬ್ಬ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.
ಅನಾರೋಗ್ಯದಿಂದ ಬಳಲುತ್ತಿದ್ದ ಪಂಜಾಬ್ ಮೂಲದ ಯುವಕ ಚಂದನ್ ಇಂದು ಪಾರ್ಶ್ವವಾಯುನಿಂದ ಮೃತಪಟ್ಟಿದ್ದಾನೆ.
ಚಂದನ್ ಜಿಂದಾಲ್ (22) ಉಕ್ರೇನ್ನಲ್ಲಿರುವ ವಿನ್ನಿಟ್ಸಿಯಾ ಮೆಮೋರಿಯಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ವೈದ್ಯಕೀಯ ಕೋರ್ಸ್ ಮಾಡುತ್ತಿದ್ದನು . ಚಂದನ್
ಇಸ್ಕೆಮಿಕ್ ಸ್ಟ್ರೋಕ್ ನಿಂದ (ಮಿದುಳಿಗೆ ರಕ್ತ ಪೂರೈಕೆ ಸರಿಯಾಗಿ ಆಗದಾಗ ಉಂಟಾಗುವ ಸ್ಟ್ರೋಕ್) ಬಳಲುತ್ತಿದ್ದನು.
ಏಕಾಏಕಿ ಅನಾರೋಗ್ಯಕ್ಕೆ ಒಳಗಾಗಿದ್ದು, ವಿನ್ನಿಟ್ಸಿಯಾದ ತುರ್ತು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.ಆದ್ರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆದೆ.
ಇನ್ನು ಅಂತಿಮ ಸಂಸ್ಕಾರಕ್ಕಾಗಿ ಮಗನ ಮೃತದೇಹವನ್ನ ತರಸಿ ಕೊಡುವಂತೆ ಮೃತ ಚಂದನ್ ತಂದೆ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದಾರೆ.