ಹೊಸದಿಗಂತ ಡಿಜಿಟಲ್ ಡೆಸ್ಕ್
ದಕ್ಷಿಣ ಆಫ್ರಿಕಾ ವಿರುದ್ಧದ ಜೂನ್ 9ರಿಂದ ಆರಂಭವಾಗಿರುವ 5 ಪಂದ್ಯಗಳ ಟಿ20 ಸರಣಿಗೂ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್ ಆಗಿದ್ದು, ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡದ ನಾಯಕರಾಗಿ ನೇಮಕಗೊಂಡಿದ್ದ ಕೆ.ಎಲ್.ರಾಹುಲ್ ಗಾಯಗೊಂಡಿದ್ದು, ಸರಣಿಯಿಂದ ಹೊರಗುಳಿದಿದ್ದಾರೆ .
ಕೆ.ಎಲ್. ರಾಹುಲ್ ಅವರ ಗಾಯವು ಗಂಭೀರವಾಗಿದೆ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ 20 ಐ ಸರಣಿಯ ಭಾಗವಾಗುವುದಿಲ್ಲ. ಹೀಗಾಗಿ ರಿಷಭ್ ಪಂತ್ ಹೆಗಲಿಗೆ ತಂಡದ ನಾಯಕತ್ವದ ಹೊಣೆ ನೀಡಿದೆ.