BIG NEWS | ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ ಯಡಿಯೂರಪ್ಪ ಹೆಸರು: ಸಿಎಂ ಬೊಮ್ಮಾಯಿ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಶಿವಮೊಗ್ಗ ನಗರದಲ್ಲಿನ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನೇ ಇಡಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಈ ಮೂಲಕ ಹಲವು ದಿನಗಳಿಂದ ಇದ್ದ ಏರ್ರ್ಪೋರ್ಟ್ ಹೆಸರಿನ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
ಇಂದು ಅವರು ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದಂತ ಅವರು, ವಿಮಾನ ನಿಲ್ದಾಣಕ್ಕೆ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನು ಇಡೋದಕ್ಕೆ ಸಚಿವ ಸಂಪುಟದಿಂದ ಒಪ್ಪಿಗೆ ನೀಡಲಾಗಿದೆ. ಈ ಹೆಸರನ್ನು ಇಡುವಂತೆ ಕೇಂದ್ರ ವಿಮಾನಯಾನ ಸಚಿವಾಲಯಕ್ಕೆ ಶಿಫಾರಸ್ಸು ಕೂಡ ಮಾಡಲಾಗಿದೆ. ಇದು ಕೇಂದ್ರದಿಂದ ಅನುಮೋದನೆಗೊಂಡು ಬರಲಿದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!