February 24, 2026
Tuesday, February 24, 2026
spot_img

BIG NEWS | ಕೇರಳ ಇನ್ಮುಂದೆ ‘ಕೇರಳಂ’…ಮೋದಿ ಸರಕಾರದಿಂದ ಮರುನಾಮಕರಣಕ್ಕೆ ಸಿಕ್ಕಿತು ಗ್ರೀನ್ ಸಿಗ್ನಲ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕೇರಳ ರಾಜ್ಯ ಇನ್ಮುಂದೆ ‘ಕೇರಳಂ’ ಎಂದು ಬದಲಾಯಿಸಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಮಂಗಳವಾರ (ಫೆಬ್ರವರಿ 24) ಹಸಿರು ನಿಶಾನೆ ತೋರಿಸಿದೆ.

ದೆಹಲಿಯ ನೂತನ ಪ್ರಧಾನ ಮಂತ್ರಿ ಕಾರ್ಯಾಲಯದ (PMO) ಕಟ್ಟಡ ‘ಸೇವಾತೀರ್ಥ’ದಲ್ಲಿ ನಡೆದ ಪ್ರಥಮ ಸಂಪುಟ ಸಭೆಯಲ್ಲೇ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ .

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ 2024ರಲ್ಲಿ ರಾಜ್ಯದ ಹೆಸರನ್ನು ಬದಲಾಯಿಸುವ ಪ್ರಸ್ತಾಪವನ್ನು ಮಾಡಿದ್ದರು. ಬಳಿಕ ಕೇರಳ ವಿಧಾನಸಭೆಯು ಒಮ್ಮತದ ನಿರ್ಣಯ ಅಂಗೀಕರಿಸಿತ್ತು.

ಇದೀಗ ಕೇರಳದಲ್ಲಿ ಈ ವರ್ಷದ ಏಪ್ರಿಲ್-ಮೇ ತಿಂಗಳಿನಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರ ಈ ಮಹತ್ವದ ಘೋಷಣೆ ಮಾಡಿರುವುದು ರಾಜಕೀಯವಾಗಿಯೂ ಕುತೂಹಲ ಮೂಡಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !