ಹೊಸದಿಗಂತ ಡಿಜಿಟಲ್ ಡೆಸ್ಕ್;
2020ರ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದ ಮೋಸ್ಟ್ ವಾಂಟೆಡ್ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆ ಪೊಲೀಸರು ಬಂಧಿಸಿದ್ದಾರೆ.
ಶಿರಸಿಯ ಟಿಪ್ಪು ನಗರ ನಿವಾಸಿ ಮೌಸೀನ್ ಅಲಿಯಾಸ್ ಇಮ್ತಿಯಾಝ್ ಶುಕುರ್ ಬಂಧಿತ ಆರೋಪಿ. ಈತ ಕೆಜಿ ಹಳ್ಳಿ-ಡಿಜಿ ಹಳ್ಳಿ ಗಲಭೆ ನಂತರ ತಲೆಮರೆಸಿಕೊಂಡಿದ್ದನು. ಮೌಸೀನ್ ಹೈದರಾಬಾದ್ಗೆ ತೆರಳಿ, ನಂತರ ಬಿಜಾಪುರ ಜಿಲ್ಲೆಯ ಸಿಂಧಗಿಯಲ್ಲಿ ನೆಲೆಸಿದ್ದನು.
ಇದೀಗ ಆರೋಪಿ ಮೌಸೀನ್ ಸಿಂಧಗಿಯಲ್ಲಿರುವ ಮಾಹಿತಿ ತಿಳಿದ ಪೊಲೀಸರು, ಕೂಡಲೇ ಕಾರ್ಯಪ್ರವೃತ್ತರಾಗಿ ಆತನನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಹಿಂದೆ ಉಗ್ರ ಚಟುವಟಿಕೆ ಸಂಬಂಧಿಸಿ ಶಿರಸಿಯಲ್ಲಿ ಎನ್ಐಎಯಿಂದ ಬಂಧಿತನಾಗಿದ್ದ ಸಾದಿಕ್, ಆರೋಪಿ ಮೌಸೀನ್ನನ್ನು ಟ್ರೇನ್ ಮಾಡಿದ್ದನು. ಈ ಮೌಸಿಕ್ ಶಿರಸಿಯಲ್ಲಿ ಈ ಹಿಂದಿನ 302 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ.