BIG NEWS | ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟದ ತನಿಖೆ NIA ಹೆಗಲಿಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರಿನ ನಾಗುರಿ ಪರಿಸರದಲ್ಲಿ ಆಟೋರಿಕ್ಷಾ ಸಂಚಾರದ ವೇಳೆ ನಡೆದ ಕುಕ್ಕರ್ ಸ್ಫೋಟ ಪ್ರಕರಣವನ್ನು ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಷ್ಟ್ರೀಯ ತನಿಖಾ ದಳ (NIA) ತನಿಖೆ ನಡೆಸಲಿದೆ.

 

ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿದ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಕೇಂದ್ರ ಸರಕಾರದ ಸೂಚನೆ ಮೇರೆಗೆ ರಾಷ್ಟ್ರೀಯ ತನಿಖಾ ದಳ (NIA) ಮಂಗಳೂರಿನ ಬಾಂಬ್ ಸ್ಫೋಟದ ತನಿಖೆ ನಡೆಸಲಿದ್ದು, ಇದರ ಹಿಂದಿರುವ ಮೂಲಭೂತವಾದಿಗಳ ಜಾಡನ್ನು ಪತ್ತೆಹಚ್ಚಲು ನೆರವಾಗಲಿದೆ.ಬಾಂಬ್ ಸ್ಫೋಟದ ಹಿಂದೆ ಅಂತರಾಜ್ಯ ದೇಶದ್ರೋಹಿಗಳ ಕೈವಾಡ ಪತ್ತೆ ಹಚ್ಚಲು #NIA ಕಾರ್ಯತತ್ಪರವಾಗಿದೆ. ನಮ್ಮ ಉನ್ನತ ಪೊಲೀಸ್ ಅಧಿಕಾರಿಗಳು ಸಹಕರಿಸುತ್ತಿದ್ದಾರೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!